KARNATAKA NEWS/ ONLINE / Malenadu today/ Sep 14, 2023 SHIVAMOGGA NEWS
ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆ ನಡುವೆ ಮಾಜಿ ಸಚಿವ ಕೆಎಸ್. ಈಶ್ವರಪ್ಪ ನಿನ್ನೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ತೆರಳಿದ ಕೆ.ಎಸ್.ಈಶ್ವರಪ್ಪ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿದ ಮಾಜಿ ಸಚಿವ ಕೆಎಸ್ಈಶ್ವರಪ್ಪ ನವರು ಮಾಜಿ ಸಿಎಂ ಕುಮಾರಸ್ವಾಮಿಯವರು ಅನಾರೋಗ್ಯದಿಂದ ಇದ್ದಾಗ ಅವರನ್ನ ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಕಳೆದ 10 ರಂದು ಬಳ್ಳಾರಿಯಲ್ಲಿ ಮನೆದೇವರ ಸನ್ನಿಧಿಯಲ್ಲಿ ಹೋಮ ನಡೆಸ್ತಿದ್ದಾಗ , ಮಾಜಿ ಸಿಎಂ ಕುಮಾರಸ್ವಾಮಿಯವರು ಫೋನ್ ಮಾಡಿದ್ದರು. ಆಗ ಮೈತ್ರಿ ಮಾತುಕತೆ ಬಗ್ಗೆ ಮಾತನಾಡಿದ್ದರು, ಅಲ್ಲದೆ ಮನೆಗೆ ಬಂದು ಹೋಗಿ ಎಂದಿದ್ದರು. ಈ ನಿಟ್ಟಿನಲ್ಲಿ ಕುಮಾರಸ್ವಾಮಿಯವರನ್ನ ಭೇಟಿಯಾಗಿ ಕುಶಲ ಕ್ಷೇಮ ವಿಚಾರಿಸಿದ್ದೇನೆ ಎಂದಿದ್ಧಾರೆ.
ಈಶ್ವರಪ್ಪನವರ ಭೇಟಿ ವೇಳೆ, ಜೆಡಿಎಸ್ ಪಕ್ಷದ ಮಾಜಿ ಸಚಿವ ಸಾ.ರಾ.ಮಹೇಶ್ ಕೂಡ ಉಪಸ್ಥಿತರಿದ್ದರು
ಇನ್ನಷ್ಟು ಸುದ್ದಿಗಳು
ಶಿವಮೊಗ್ಗ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ! ಯಾವಾಗ ಸಂಚರಿಸಲಿದೆ ಬಹುನಿರೀಕ್ಷಿತ ಟ್ರೈನ್?
ಗಣೇಶೋತ್ಸವ ಹಾಗೂ ಈದ್ ಮಿಲಾದ್ ! ಸೌಹಾರ್ದ ಸಭೆಯಲ್ಲಿ ಸಚಿವರು & ಶಾಸಕರ ಒಂದೇ ಮಾತು! ಏನೇನು ನಡೀತು ವಿವರ ಇಲ್ಲಿದೆ
