ಬಾಯಿ ತಪ್ಪಿ ಆಡಿದ ಮಾತು! ಖರ್ಗೆ, ಖಂಡ್ರೆ ಬಗ್ಗೆ ಅಪಾರ ಗೌರವವಿದೆ ಎಂದರು ಮಾಜಿ ಗೃಹಸಚಿವ!

Former Home MinisterAraga Jnanendra said that he has immense respect for Mallikarjun Kharge and Ishwar Khandre. ಮಲ್ಲಿಕಾರ್ಜುನ್​ ಖರ್ಗೆ ಹಾಗೂ ಈಶ್ವರ್ ಖಂಡ್ರೆಯವರ ಬಗ್ಗೆ ಅಪಾರ ಗೌರವ ಇದೆ ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಬಾಯಿ ತಪ್ಪಿ ಆಡಿದ ಮಾತು! ಖರ್ಗೆ, ಖಂಡ್ರೆ ಬಗ್ಗೆ ಅಪಾರ ಗೌರವವಿದೆ ಎಂದರು ಮಾಜಿ ಗೃಹಸಚಿವ!

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS 

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್​ ವರದಿ ಬಗ್ಗೆ  ಕಾಂಗ್ರೆಸ್ ಸರ್ಕಾರದ ಸಚಿವರು ನೀಡಿದ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯೊಂದರಲ್ಲಿ ಆಡಿದ ಮಾತು ವಿರೋಧಕ್ಕೆ ಕಾರಣವಾಗಿತ್ತು. 

ಪ್ರತಿಭಟನೆ ಸಂದರ್ಭದಲ್ಲಿ ಆರಗ ಜ್ಞಾನೇಂದ್ರರವರು ಆಡಿದ ಮಾತು ವಿವಾದಕ್ಕೆ ಕಾರಣವಾಯ್ತಾ?

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ರವರ ಬಗ್ಗೆ ಆರಗ ಜ್ಞಾನೇಂದ್ರರವರು ಆಡಿದ ಮಾತು  ವಿವಾದವನ್ನ ಎಬ್ಬಿಸಿತ್ತು. ಈ ಸಂಬಂಧ ಕಾಂಗ್ರೆಸ್​ ಪಕ್ಷ ತನ್ನ ಟ್ವೀಟ್​ನಲ್ಲಿ ಆರಗರವರನ್ನು ಟೀಕಿಸಿತ್ತು. ಈ ಮಧ್ಯೆ   ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ತಮ್ಮ ಮಾತಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. 

ಮಲ್ಲಿಕಾರ್ಜುನ್​  ಖರ್ಗೆರವರ ಕುರಿತು ಅಪಾರ ಗೌರವವಿದೆ ಎಂದು ಸ್ಪಷ್ಟಪಡಿಸಿರುವ ಆರಗ ಜ್ಞಾನೇಂದ್ರರವರು,  ಮಲೆನಾಡಿಗರಿಗೆ ಶಾಪವಾಗಿರುವ ಕಸ್ತೂರಿ ರಂಗನ್ ವಿಚಾರಕ್ಕೆ ಸಂಬಂಧಿಸಿದಂತೆ ಆಡಿದ ಭಾಷಣದ ವೇಳೆ,  ಮಾತಿನ ಬರದಲ್ಲಿ ಬಾಯಿ ತಪ್ಪಿನಿಂದ ಈ ರೀತಿ ಆಗಿಯೇ ಹೊರತು, ಖಂಡ್ರೆ ಅವರಿಗಾಗಲಿ, ಖರ್ಗೆ ಅವರಿಗಾಗಲಿ ಅವರ ಗೌರವಕ್ಕೆ ಧಕ್ಕೆ ಆಗುವಂತಹ ಮಾತುಗಳನ್ನು ಆಡಿಲ್ಲ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಿರಿತನದ ಬಗ್ಗೆ ಹಾಗೂ  ಅವರ ಮೇಲೆ ಅಪಾರವಾದ ಗೌರವವಿದೆ ಎಂದಿದ್ದು,  ಕೆಲವರು ಅನಗತ್ಯವಾಗಿ ಈ ಕುರಿತು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದಿದ್ಧಾರೆ. 

ತೀರ್ಥಹಳ್ಳಿ ಪೇಟೆಯಲ್ಲಿ ಯಮಹಾ ಬೈಕ್​ನಲ್ಲಿ ರೇಸಿಗಿಳಿದವರಿಗೆ ಪೊಲೀಸರ ಶಾಕ್! ಕೋರ್ಟ್​ ಹಾಕಿತು ದಂಡ

ತೀರ್ಥಹಳ್ಳಿ ಪೇಟೆಯಲ್ಲಿ ಬೈಕ್​  ರೇಸಿಂಗ್ ನಡೆಸಿದ ಇಬ್ಬರಿಗೆ ತೀರ್ಥಹಳ್ಳಿ ಕೋರ್ಟ್  5 ಸಾವಿರ ರೂಪಾಯಿ ದಂಡ ವಿಧಿಸಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಕೋರ್ಟ್​ಗೆ  ಚಾರ್ಜ್​ಶೀಟ್​ ಸಲ್ಲಿಸಿದ್ರು. ದಿನಾಂಕಃ 01-08-2023  ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಬೈಲಿನ ಹೆಗ್ಡೆ ಪೆಟ್ರೋಲ್ ಬಂಕ್ ನ ಹತ್ತಿರ  02 ಯಮಹಾ ಬೈಕ್ ಗಳಲ್ಲಿ ಸವಾರರಿಬ್ಬರು ರೇಸಿಂಗ್ ಮಾಡುತ್ತಿದ್ದರು. ಇದನ್ನ ಇನ್ನೊಂದು ಬೈಕ್​ನ ಹಿಂಬದಿಯಲ್ಲಿ ಹಿಮ್ಮುಖವಾಗಿ ಕುಳಿತಿದ್ದ ಸವಾರ ವಿಡಿಯೋ ಮಾಡುತ್ತಿದ್ದ. ಇದನ್ನ ಗಮನಿಸಿದ ಪೊಲೀಸ್ ಉಪಾಧೀಕ್ಷಕ , ಗಜಾನನ  ವಾಮನ ಸುತಾರರವರು, ಬೈಕ್​ಗಳನ್ನ ತಡೆದು ನಿಲ್ಲಿಸಿ ಕೇಸ್ ದಾಖಲಿಸಿದ್ದರು. ಈ ಕೇಸ್​ಗೆ ಸಂಬಂಧಿಸಿದಂತೆ,  ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್.ಸಿ ನ್ಯಾಯಾಲಯ   ಬೈಕ್ ಸವಾರರುಗಳಾದ 1) ಸೌರವ್, 21 ವರ್ಷ, ಸೀಬಿನ ಕೆರೆ ತೀರ್ಥಹಳ್ಳಿ ಮತ್ತು  2) ಶಂಕರ್, 21 ವರ್ಷ, ತೀರ್ಥಹಳ್ಳಿ ರವರುಗಳಿಗೆ ತಲಾ 5,000/- ರೂ ದಂಡ ವಿಧಿಸಿದ್ದಾರೆ. 

ಸೊರಬದ ಚಂದ್ರಗುತ್ತಿ ರೇಣುಕಾಂಬ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನ!?

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಚಂದ್ರಗುತ್ತಿಯಲ್ಲಿರುವ  ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಾಲಯದಲ್ಲಿ(Chandragutti Renukamba Temple)  ಕಳ್ಳತನಕ್ಕೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹುಣ್ಣಿಮೆ ಹಿನ್ನೆಲೆಯಲ್ಲಿ ಭಕ್ತರ ದಂಡೆ ಹರಿದುಬಂದಿತ್ತು. ಇದರ ಬೆನ್ನಲ್ಲೆ ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಶಂಕೆ ಎದುರಾಗಿದೆ. .ದೇವಾಲಯ ಹಾಗೂ ಗರ್ಭಗುಡಿಯ ಬಾಗಿಲನ್ನು ಮುರಿದಿರುವ ದುಷ್ಕರ್ಮಿಗಳು ಮೂರ್ತಿಯನ್ನ ಕೆಳಕ್ಕೆ ಬಿಸಾಡಿದ್ದಾರೆ. ಆದರೆ ದೇಗುಳದ ಹುಂಡಿಗಳು ಭದ್ರವಾಗಿದೆ. ಇನ್ನೂ ಘಟನೆ ಬೆನ್ನಲ್ಲೆ ದೇವಾಲಯದ ಬಳಿ ಜಮಾಯಿಸಿದ ಸ್ಥಳೀಯರು ದೇಗುಲಕ್ಕೆ ಸೂಕ್ತ ಭದ್ರತೆ ಇಲ್ಲ. ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಆಗ್ರಹಿಸಿದ್ರು. ಘಟನೆ ಬೆನ್ನಲ್ಲೆ ತಹಶೀಲ್ದಾರ್ ಹುಸೇನ್ ಸರಕಾವತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಹಿಳೆಯ ಕೈ ಹಿಡಿದು ಎಳೆದಾಡಿದ್ದಕ್ಕೆ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ?

ಮಹಿಳೆಯೊಬ್ಬರ ಕೈ ಹಿಡಿದು ಎಳೆದಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋರ್ಟ್​ ಆರೋಪಿಗೆ 2 ವರ್ಷ ಆರು ತಿಂಗಳು ಸಜೆ ನೀಡಿದೆ. ಶಿವಮೊಗ್ಗ ನಗರದ ಎಪಿಎಂಸಿಯಲ್ಲಿ ಸ್ವಚ್ಛತಾ ಕರ್ಮಿಯಾಗಿ ಕೆಲಸ ಮಾಡುತ್ತಿದ್ದ,  33 ವರ್ಷದ ಮಹಿಳೆಯೊಬ್ಬರ ಕೈ ಹಿಡಿದು ಎಳದಾಡಿದ ಘಟನೆ ಸಂಬಂಧ  ದಿನಾಂಕಃ 04-04-2019 ರಂದು ಬೆಳಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಚಂದ್ರಪ್ಪ ಎಂಬವನ ವಿರುದ್ಧ ದಾಖಲಾದ ದೂರಿನ ಜೊತೆಗೆ ಅವರ ಮಗ ಜಾತಿ ನಿಂದನೆ ಮಾಡಿದ ಆರೋಪವೂ ಕೇಳಿಬಂದಿತ್ತು. ಈ ಸಂಬಂಧ ಠಾಣೆಯಲ್ಲಿಐಪಿಸಿ  354(B), 504, 506 ಸಹಿತ 34 ಐಪಿಸಿ ಮತ್ತು  3(1)(s), 3(1)(w)(i)(ii), 3(2)(va) The SC & ST (PA) Ac  ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದರ ತನಿಖೆಯನ್ನ ಕೈಗೊಂಡು, ಅಂದಿನ ಡಿವೈಎಸ್​ಪಿ ಉಮೇಶ್​ ಈಶ್ವರ್ ನಾಯ್ಕ್​ ಶಿವಮೊಗ್ಗ  2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು. ಪ್ರಕರಣ ಸಂಬಂಧ  ಸರ್ಕಾರಿ ಅಭಿಯೋಜಕಿ ಪುಷ್ಪಾ  ವಾದ ಮಂಡಿಸಿದ್ದರು.  ಸದ್ಯ ಈ  ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಮಾನ್ಯ ನ್ಯಾಯಧೀಶರಾದ  ಬಿ.ಆರ್ ಪಲ್ಲವಿ ರವರು ದಿನಾಂಕಃ- 02-08-2023  ರಂದು ಆರೋಪಿ ಚಂದ್ರಪ್ಪರಿಗೆ  02 ವರ್ಷ 06 ತಿಂಗಳು ವರ್ಷ ಸಾಧಾ ಕಾರಾವಾಸ ಶಿಕ್ಷೆ ಮತ್ತು 30,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿಯಾಗಿ 05 ತಿಂಗಳು ಸಾದಾ ಕಾರವಾಸ ಶಿಕ್ಷೆ ವಿಧಿಸಿ ಆದೇಶ ನೀಡಿರುತ್ತಾರೆ.



ಇನ್ನಷ್ಟು ಸುದ್ದಿಗಳು 





 ​