ಮಲ್ಲನ ಕೊಲೆ ಪ್ರಕರಣ | ನಾಲ್ವರು ಅರೆಸ್ಟ್ ! | SP ಮಿಥುನ್ ಕುಮಾರ್ ಹೇಳಿದ್ದೇನು?

Four people have been arrested in connection with the incident in Chikal, Shimoga SP Mithun Kumar has informed about this.

ಮಲ್ಲನ ಕೊಲೆ ಪ್ರಕರಣ | ನಾಲ್ವರು ಅರೆಸ್ಟ್ ! | SP ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Nov 15, 2023 SHIVAMOGGA NEWS

Shivamogga | Malnenadutoday.com |  ಶಿವಮೊಗ್ಗ ನಗರದ ಗುಡ್ಡೆ ಕಲ್​ ದೇವಸ್ಥಾನದ ಸಮೀಪ, ಚಿಕ್ಕಲ್​ನಲ್ಲಿ ನಡೆದ ಮಲ್ಲೇಶ್ ಅಲಿಯಾಸ್ ಮಲ್ಲಿ ಅಲಿಯಾಸ್ ಮಲ್ಲನ ಕೊಲೆ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಪ್ರತಿಕ್ರಿಯಿಸಿದ್ದಾರೆ. 



READ :ನಾಲ್ವರನ್ನ ಸಾಯಿಸಿ ಬೆಳಗಾವಿಯಲ್ಲಿ ಅಡಗಿದ್ದ ಆರೋಪಿ! ಉಡುಪಿ ಕೇಸ್​ನಲ್ಲಿ ಕಂಡು ಬಂದಿದ್ದೇನು?



ನಿನ್ನೆ ಚಿಕ್ಕಲ್​ನಲ್ಲಿ ನಡೆದ ಘಟನೆ ಸಂಬಂಧ ಈಗಾಗಲೇ ನಾಲ್ವರನ್ನ ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಏಳು ಜನರ ದುಷ್ಕರ್ಮಿಗಳ ತಂಡ ಘಟನೆಯಲ್ಲಿ ಪಾಲ್ಗೊಂಡಿದ್ದು, ಈ ಸಂಬಂಧ ಮೂವರಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ತಿಳಿಸಿದ್ದಾರೆ. 

READ :ಗಾಂಧಿ ಬಜಾರ್​ ಮಲ್ಲ ಚಿಕ್ಕಲ್​ನಲ್ಲಿ ಫಿನಿಶ್! ಲವ್​ & ರಿವೆಂಜ್​ ಮತ್ತು ಪಾತಾಳಿ ಗ್ಯಾಂಗ್!? ಏನಿದು!?



ಮಾಧ್ಯಮಗಳಿಗೆ ಪ್ರಕರಣ ಕುರಿತಾಗಿ ಮಾಹಿತಿ ನೀಡಿರುವ ಮಿಥುನ್ ಕುಮಾರ್ ಐಪಿಎಸ್​ ಪ್ರಕರಣದಲ್ಲಿ  ಆರೋಪಿಗಳು ಹಾಗೂ ಕೊಲೆಯಾದ ವ್ಯಕ್ತಿಯು ಸಂಬಂಧಿಕರಾಗಿದ್ದಾರೆ. ಹುಡುಗಿಯೊಬ್ಬಳನ್ನು ಕೊಲೆಯಾದ ಮಲ್ಲ ಪ್ರೀತಿಸ್ತಿದ್ದ. ಆದರೆ ವಯಸ್ಸಿನ ಕಾರಣಕ್ಕೆ ಆತನಿಗೆ ಹುಡುಗಿಯನ್ನ ನೀಡಲು ವಿರೋಧವಿತ್ತು. 

ಆದಾಗ್ಯು ಮಲ್ಲ ಹುಡುಗಿಯನ್ನ ತನ್ನನ್ನು ಪ್ರೀತಿಸುವಂತೆ ಪೀಡಿಸ್ತಿದ್ದ. ಇದೆ ಕಾರಣಕ್ಕೆ ಆ ಹುಡುಗಿ ಆತ್ಮಹತ್ಯೆಮಾಡಿಕೊಂಡಿದ್ದಳು. ಸಹೋದರಿಯ ಸಾವಿನ ಹಿನ್ನೆಲೆಯಲ್ಲಿ ಸಹೋದರರು ಮಲ್ಲನನ್ನ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. 

READ :ನಿಮಗೂ ಶಾಕ್​ ಆಗಬಹುದು! ನೀವು 90 ಸಾವಿರ ಕಳೆದುಕೊಳ್ಳಬಹುದು! ಹೇಗೆ ಗೊತ್ತಾ?