INFORMATION NEWS

ಶಿವಮೊಗ್ಗದ ತೃಪ್ತಿ ಹೆಲ್ತ್ ಕೇರ್ ವತಿಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ಯಾವಾಗ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಜಿಲ್ಲಾ ಅಖಿಲ ಕರ್ನಾಟಕ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕರ ಒಕ್ಕೂಟದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದವರಿಗಾಗಿ ಏಪ್ರಿಲ್ 09 ರಂದು ತೃಪ್ತಿ ಹೆಲ್ತ್ ಕೇರ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. 

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಕಾರ್ಯಾಚರಣೆ : ರಾಂಗ್​ ಸೈಡಲ್ಲಿ ಕಾರಿಗೆ ಅಡ್ಡ ಬಂದು ಮಹಿಳೆಗೆ ಕಿರಿಕಿರಿ, ಆಟೋ ಚಾಲಕರಿಬ್ಬರಿಗೆ ದಂಡ ಎಚ್ಚರಿಕೆ

ಈ ಕುರಿತು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ಸಲ್ಟೆಂಟ್ ಯೂರಾಲಜಿಸ್ಟ್ ಮತ್ತು ಆಂಡ್ರಾಲಜಿಸ್ಟ್ ಡಾ. ಎಸ್. ಚಂದ್ರಶೇಖರ್ ಅವರು ಮಾತನಾಡಿ, ದುರ್ಗಿ ಗುಡಿ ಮುಖ್ಯ ರಸ್ತೆಯಲ್ಲಿರುವ ಶನೇಶ್ವರ ದೇವಾಲಯದ ಮುಂಭಾಗದ ತೃಪ್ತಿ ಹೆಲ್ತ್ ಕೇರ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು. ಇದುವರೆಗೂ ದೇವರಿಂದ ಮತ್ತು ಭೂಮಿ ತಾಯಿಯಿಂದ ಪಡೆದದ್ದು ಸಾಕು, ಇನ್ನಾದರೂ ಬಡ ಬಗ್ಗರಿಗೆ ಸಹಾಯವಾಗಲಿ ಎಂಬ ದೃಷ್ಟಿಯಿಂದ ಈ ಉಚಿತ ಶಿಬಿರವನ್ನು ಆಯೋಜಿಸಲಾಗಿದೆ. ಈ ಹಿಂದೆಯೂ ಸಹ ಅನೇಕ ಉಚಿತ ಶಿಬಿರವನ್ನು ಮಾಡಿದ್ದೇವೆ ಎಂದು ಅವರು ತಿಳಿಸಿದರು.

ಈ ತಪಾಸಣಾ ಶಿಬಿರದಲ್ಲಿ ಯುರಾಲಜಿ ಕನ್ಸಲ್ಟೇಷನ್, ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್, ಸಿ-ಆರ್‌ಎಂ ಫ್ಲೋರೋಸ್ಕೋಪ್ ಸ್ಕ್ಯಾನ್, ಮೂತ್ರಪಿಂಡದ ಕಲ್ಲಿನ ಸ್ಕ್ಯಾನ್, ಇ.ಸಿ.ಜಿ ಹಾಗೂ ಬಿಪಿ ಮತ್ತು ಶುಗರ್ (RBS) ಪರೀಕ್ಷೆಗಳು ಸಂಪೂರ್ಣ ಉಚಿತವಾಗಿರುತ್ತದೆ. ಅಷ್ಟೇ ಅಲ್ಲದೇ, ಈ ಕಾರ್ಯಕ್ರಮದಲ್ಲಿ ಕಾರ್ಮಿಕರಿಗಾಗಿ ಇ-ಶ್ರಮ ಕಾರ್ಡ್, ಅಸಂಘಟಿತ ಕಾರ್ಮಿಕರ ಕಾರ್ಡ್ ಮತ್ತು ಸೆಂಟ್ರಲ್ ಬ್ಯಾಂಕ್ ಜೀರೋ ಬ್ಯಾಲೆನ್ಸ್ ಅಕೌಂಟ್ ಮಾಡಿಸಿಕೊಡಲಾಗುವುದು. ಇದರ ಸೌಲಭ್ಯ ಪಡೆಯುವವರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ 2 ಪಾಸ್ಪೋರ್ಟ್ ಸೈಜ್ ಫೋಟೋಗಳನ್ನು ತರಬೇಕೆಂದು ಅವರು ಮನವಿ ಮಾಡಿದರು.

ಈ ವಿಶೇಷ ತಪಾಸಣಾ ಶಿಬಿರವು ಪ್ರತಿ ಗುರುವಾರ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಲಿದ್ದಾರೆ. ಉದ್ಘಾಟನೆಯ ನಂತರ ಸಂಸದರು ಕಾರ್ಮಿಕರಿಗೆ ಕಾರ್ಮಿಕ ಕಾರ್ಡ್‌ಗಳನ್ನು ವಿತರಣೆ ಮಾಡಲಿದ್ದಾರೆ ಎಂದು ಡಾ. ಎಸ್​​ ಚಂದ್ರಶೇಖರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

 Free Health Camp by Trupti Health Care

 Free Health Camp by Trupti Health Care
 Free Health Camp by Trupti Health Care

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.