ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು ಜೂನ್ 23 ರ ಮಂಗಳವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಗಾಜನೂರು, ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ಯರಗನಾಳ್, ಕುಸ್ಕೂರು, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
