ಶಿವಮೊಗ್ಗ: ನಗರದ ಹೊಸಮನೆ ಏರಿಯಾದ ಮನೆಯೊಂದರಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ 9 ಜನ ಆರೋಪಿಗಳನ್ನು ದೊಡ್ಡಪೇಟೆ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಸಕಲೇಶಪುರ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ
ಘಟನೆಯ ವಿವರ
ಹೊಸಮನೆ ಏರಿಯಾದ ಮನೆಯೊಂದರಲ್ಲಿ ಕೆಲವರು ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ದೊಡ್ಡಪೇಟೆ ಪೊಲೀಸರಿಗೆ ಲಭ್ಯವಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಪೊಲೀಸರು, ಕೂಡಲೇ ಆ ಸ್ಥಳಕ್ಕೆ ಧಾವಿಸಿ ಮನೆಯೊಳಗೆ ನುಗ್ಗಿ ಅನಿರೀಕ್ಷಿತ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಜೂಜಾಟ ಆಡುತ್ತಿರುವುದು ಪತ್ತೆಯಾಗಿದ್ದು, ಸ್ಥಳದಲ್ಲಿದ್ದ 9 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಪೊಲೀಸರು ಆರೋಪಿಗಳಿಂದ ಇಸ್ಪೀಟ್ ಜೂಜಾಟಕ್ಕೆ ಬಳಸಿದ್ದ 33,470 ರೂಪಾಯಿ ನಗದು ಹಣ, 8 ಮೊಬೈಲ್ ಫೋನ್ಗಳು ಹಾಗೂ ಇಸ್ಪೀಟ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
