15 ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಪೇಪರ್​ ಬ್ಲಾಷ್ಟಿಂಗ್​ ಹಾಗೂ ಸಿಡಿಮದ್ದು ನಿಷೇಧ

ಶಿವಮೊಗ್ಗ :  ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ  ಜಿಲ್ಲಾಡಳಿತ ಕೆಲವು  ನಿಯಮಗಳನ್ನು ಜಾರಿಗೆ ತಂದಿದೆ.

ಹಬ್ಬದ ಸಂದರ್ಭದಲ್ಲಿ ಜಿಲ್ಲಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆಗಸ್ಟ್​ 27 ರಿಂದ ಸೆಪ್ಟಂಬರ್​ 15  ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

Ganesh Chaturthi