Ganja Seized in Bhadravathi / ಮಲೆನಾಡು ಟುಡೆ ಸುದ್ದಿ / ಭದ್ರಾವತಿ / ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣೆಯ ಲಿಮಿಟ್ಸ್ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಿನಾಂಕ 24-06-2026 ರಂದು ಶೆಟ್ಟಿಹಳ್ಳಿ ಗ್ರಾಮದ ಸಮೀಪ ಈ ಘಟನೆ ನಡೆದಿದೆ. ಘಟನೆ ವಿವರ ಹೀಗಿದೆ.
ಶೆಟ್ಟಿಹಳ್ಳಿಯಿಂದ ತಡಸ ಮಾರ್ಗದ ಮೂಲಕ ಭದ್ರಾವತಿ ಕಡೆಗೆ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡುತ್ತಿರುವುದಾಗಿ ಗ್ರಾಮಾಂತರ ಪೊಲೀಸ್ ಠಾಣೆಗೆ ಇನ್ಫಾರ್ಮೆಶನ್ ಬಂದಿತ್ತು. ಈ ನಿಟ್ಟಿನಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಚಿದಾನಂದ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯಾಚರಣೆಯ್ಲಿ 31 ವರ್ಷದ ಸಯ್ಯದ್ ಮುಬಾರಕ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದ್ದು, ಆತನ ಬಳಿ ಇದ್ದ ಸುಮಾರು 43,900 ರೂಪಾಯಿ ಮೌಲ್ಯದ ಒಟ್ಟು 878 ಗ್ರಾಂ ತೂಕದ ಗಾಂಜಾ ಅಮಾನತ್ತುಪಡಿಸಿಕೊಂಡಿದ್ದಾರೆ.
ಇನ್ನೂ ಗಾಂಜಾ ಮಾರಾಟದ ಸಂಬಂಧ ಸಯ್ಯದ್ ಮುಬಾರಕ್ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1985 ರ ನಾರ್ಕೋಟಿಕ್ ಡ್ರಗ್ಸ್ ಅಂಡ್ ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (NDPS) ಕಾಯ್ದೆಯ ಕಲಂ 20(b) (ii) A, 8(c) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು ತನಿಖೆ ಮುಂದುವರಿದಿದೆ.
ಈ ದಿನ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನದ ಅಂಗವಾಗಿ ಪಿಎಸ್ಐ ಆನಂದಪುರ ಪೊಲೀಸ್ ಠಾಣೆ ರವರು ಆನಂದಪುರ ರೈಸ್ ಮಿಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ವಿವರಿಸಿರುತ್ತದೆ. #police #service #shivamogga #karnatakapolice @DgpKarnataka pic.twitter.com/5RJdWEI7JR
— SP Shivamogga (@Shivamogga_SP) June 26, 2026
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್ಸ್ಕ್ರೈಬ್ ಮಾಡಿ.
