SHIVAMOGGA NEWS TODAY

ಗ್ಯಾಸ್ ಸಿಲಿಂಡರ್ ಕೊರತೆ: ಸೌದೆ ಒಲೆ ಮೊರೆ ಹೋದ ಶಿವಮೊಗ್ಗದ ಹೋಟೆಲ್‌ಗಳು!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಮಧ್ಯಪ್ರಾಚ್ಯ ದೇಶಗಳ ಯುದ್ಧದ ಬಿಸಿ ಇದೀಗ ನೇರವಾಗಿ ಕರ್ನಾಟಕದ ಹೋಟೆಲ್ ಉದ್ಯಮಕ್ಕೆ ತಟ್ಟಿದೆ. ಕಳೆದ ಅನೇಕ ದಿನಗಳಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲದ ಕೊರತೆಯಿಂದಾಗಿ ಹೋಟೆಲ್ ಬಂದ್ ಮಾಡುವ ನಿರ್ಧಾರದಲ್ಲಿದ್ದ ಮಾಲೀಕರು, ಇದೀಗ ಅನಿವಾರ್ಯವಾಗಿ ಸೌದೆ ಒಲೆಯಲ್ಲಿ ಅಡುಗೆ ತಯಾರಿಸಿ ಬಡಿಸಲು ಮುಂದಾಗಿದ್ದಾರೆ. ಅದರಂತೆ, ಇಂದು ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ‘ನಿಸರ್ಗ ಹೋಟೆಲ್’ನಲ್ಲಿ ಸೌದೆ ಒಲೆಯ ಮೂಲಕ ಅಡುಗೆ ತಯಾರಿಸಲಾಯಿತು.

ಶಿವಮೊಗ್ಗ: ಕಾರು ತೊಳೆಯುವಾಗ ಪಕ್ಕದ ಮನೆಯ ಗೋಡೆಗೆ ಹಾರಿತು ನೀರು, ಆಮೇಲೆ ಆಗಿದ್ದೇ ಬೇರೆ

ಹೌದು, ಶಿವಮೊಗ್ಗದ ಸವಳಂಗ ರಸ್ತೆಯ ಫ್ಲೈ ಓವರ್ ಕೆಳಗಿರುವ ನಿಸರ್ಗ ಹೋಟೆಲ್‌ನ ಹೊರಗಿನ ಪಾರ್ಕಿಂಗ್ ಜಾಗದಲ್ಲಿ ಸೌದೆ ಒಲೆ ಹಚ್ಚಿ ಅಡುಗೆ ಸಿದ್ಧಪಡಿಸಲಾಗುತ್ತಿದೆ. ಅಡುಗೆ ಅನಿಲದ ತೀವ್ರ ಅಭಾವವಿರುವುದರಿಂದ ಹೋಟೆಲ್‌ನ ಮೆನುವನ್ನು ಕಡಿತಗೊಳಿಸಲಾಗಿದ್ದು, ಸೀಮಿತ ಪ್ರಮಾಣದ ಆಹಾರವನ್ನು ಮಾತ್ರ ತಯಾರಿಸಲಾಗುತ್ತಿದೆ. ಈ ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಗ್ರಾಹಕರು ಸಹಕರಿಸಬೇಕೆಂದು ಹೋಟೆಲ್ ಮುಂದೆ ಫಲಕ ಅಳವಡಿಸಲಾಗಿದೆ.

ಈ ಕುರಿತು ನಿಸರ್ಗ ಹೋಟೆಲ್‌ನ ಮ್ಯಾನೇಜರ್ ರಮೇಶ್ ಮಾತನಾಡಿ, ಗ್ಯಾಸ್ ಕೊರತೆಯಿಂದಾಗಿ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. ಹೋಟೆಲ್ ಒಳಗಡೆ ಸೌದೆ ಒಲೆ ಹಚ್ಚಿದರೆ ಪಿಓಪಿ (POP) ಹಾಳಾಗುತ್ತದೆ. ಆದ್ದರಿಂದ ಪಾರ್ಕಿಂಗ್ ಜಾಗವನ್ನು ದಿನಕ್ಕೆ 4 ಸಾವಿರ ರೂಪಾಯಿಯಂತೆ ಬಾಡಿಗೆಗೆ ಪಡೆದು ಅಡುಗೆ ಮಾಡುತ್ತಿದ್ದೇವೆ. ಪಕ್ಕದಲ್ಲೇ ಶಾಲೆ ಇರುವುದರಿಂದ ಮಕ್ಕಳಿಗೆ ತೊಂದರೆಯಾಗಬಾರದೆಂದು ಬೆಳಿಗ್ಗೆ 3 ಗಂಟೆಗೆ ಬಂದು ಅಡುಗೆ ಕೆಲಸ ಆರಂಭಿಸುತ್ತೇವೆ. ಗ್ಯಾಸ್ ಸಿಲಿಂಡರ್ ಅಭಾವದಿಂದಾಗಿ ಹೋಟೆಲ್ ನಿರ್ವಹಣೆ ಬಹಳ ಕಷ್ಟವಾಗಿದೆ, ಎಂದು ಅಳಲು ತೋಡಿಕೊಂಡರು.

Gas Shortage Firewood Cooking in Shivamogga Hotels

Gas Shortage Firewood Cooking in Shivamogga Hotels
Gas Shortage Firewood Cooking in Shivamogga Hotels
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.