ಜ. 1 ರಿಂದ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು
ಶಿವಮೊಗ್ಗ: 2022-23 ನೇ ಸಾಲಿನ ಭದ್ರಾ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ ಬೇಸಿಗೆ ಬೆಳೆಗಳಿಗಾಗಿ ಜನವರಿ 1 ರ ರಾತ್ರಿಯಿಂದ ಭದ್ರಾ ಎಡ ದಂಡೆ ನಾಲೆ ಹಾಗೂ ಜನವರಿ 3 ರ ರಾತ್ರಿಯಿಂದ ಬಲದಂಡೆ ನಾಲೆಗಳಿಗೆ ನೀರು ಹರಿಸಲಾಗುವುದು.
ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್ – ಎಂಜಿಆರ್ ಚೆನ್ನೈ ಸೆಂಟ್ರಲ್ ಸ್ಪೆಷಲ್ ಟ್ರೈನ್ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ
ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ರೈತ ಮುಖಂಡರು, ಅಚ್ಚುಕಟ್ಟು ರೈತರು ಹಾಗೂ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಜನವರಿ 01 ರ ರಾತ್ರಿಯಿಂದಲೇ ಎಡದಂಡೆ ನಾಲೆಗೆ ಹಾಗೂ ಜನವರಿ 03 ರ ರಾತ್ರಿಯಿಂದಲೇ ಭದ್ರಾ ಬಲದಂಡೆ ನಾಲೆ, ಆನವೇರಿ ಶಾಖಾನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ನೀರನ್ನು ಹರಿಸಲಾಗುತ್ತಿದೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಭ. ಯೋ.ನೀ.ಸ.ಸಮಿತಿಯ ಸದಸ್ಯ ಕಾರ್ಯದರ್ಶಿ ಎನ್. ಸುಜಾತ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನಮ್ಮ ಸೋಶಿಯಲ್ ಮೀಡಿಯಾ : ಟ್ವಿಟ್ಟರ್ : ಫೇಸ್ಬಕ್ : ಇನ್ಸ್ಟಾಗ್ರಾಮ್ : ಟೆಲಿಗ್ರಾಂ : ವಾಟ್ಸ್ಯಾಪ್
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link
