ಶಕ್ತಿ ಯೋಜನೆ ಹೆಸರಲ್ಲಿ ಸರ್ಕಾರಿ ಬಸ್ ನಿರ್ವಾಹಕನಿಗೆ ಖಾಸಗಿ ಬಸ್ ಸಿಬ್ಬಂದಿ ಹಲ್ಲೆ ! ತೀರ್ಥಹಳ್ಳಿಯಲ್ಲಿ ನಡೆದಿದ್ದೇನು?
In the name of Shakti Yojana, a government bus conductor was attacked by private bus staff. What happened in Thirthahalli?
SHIVAMOGGA | Dec 10, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೇಟೆಯಲ್ಲಿನ ತೀರ್ಥಹಳ್ಳಿ ಖಾಸಗಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ನ ಕೀ ಕಿತ್ತುಕೊಂಡು, ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ಆರೋಪವೊಂದು ಕೇಳಿಬಂದಿದ್ದು, ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ದೂರು ಸಹ ದಾಖಲಾಗಿದೆ.
ಸರ್ಕಾರದ ಶಕ್ತಿ ಯೋಜನೆಯ ಕಾರಣ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರ ಕೊರತೆ ಎದುರಾಗಿದೆ. ಮಹಿಳೆಯರು ಬಸ್ ಕಡಿಮೆಯಿದ್ದರೂ ಸರ್ಕಾರಿ ಬಸ್ಗಳಿಗಾಗಿ ಕಾದು ಹತ್ತುತ್ತಿದ್ದಾರೆ. ಈ ವಿಚಾರದಲ್ಲಿಯೇ ಈ ಘಟನೆ ನಡೆದಿದೆ ಎಂದು ದೂರಲಾಗಿದೆ.
READ: ಬಿಗ್ ಬಾಸ್ ಕಾರ್ಯಕ್ರಮದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರದ ವಕೀಲರಿಂದ ಡಿಜಿಪಿಗೆ ಪತ್ರ
ಸರ್ಕಾರಿ ಬಸ್ ನಿರ್ವಾಹಕ ಬಸ್ನ್ನ ತೀರ್ಥಹಳ್ಳಿ ಬಸ್ ನಿಲ್ದಾಣಕ್ಕೆ ತಂದ ಬೆನ್ನಲ್ಲೆ ಖಾಸಗಿ ಬಸ್ವೊಂದಕ್ಕೆ ಸೇರಿದವರು ಸರ್ಕಾರಿ ಬಸ್ನ್ನ ತಡೆದು ಡ್ರೈವರ್ನಿಂದ ಕೀ ಕಿತ್ತುಕೊಂಡಿದ್ದಾರೆ. ಅಲ್ಲದೆ ಡ್ರೈವರ್ ಹಾಗೂ ಕಂಡೆಕ್ಟರ್ಗಳಿಗೆ ನಿಂದಿಸಿದ್ದಾರೆ. ಹಲ್ಲೆ ಸಹ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಲ್ಲಿದ್ದವರು ಜಗಳ ಬಿಡಿಸಿದ್ದಾರೆ. ಸದ್ಯ ಈ ಸಂಬಂಧ ಕಂಪ್ಲೆಂಟ್ ಆಗಿದ್ದು ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.