ಅರಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಭದ್ರಾವತಿ ಶರತ್​ರ ಮೃತದೇಹ ಪತ್ತೆ!

Bhadravathi Sharath's body found lying in Arasinagundi fallsಅರಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಭದ್ರಾವತಿ ಶರತ್​ರ ಮೃತದೇಹ ಪತ್ತೆ!

ಅರಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಭದ್ರಾವತಿ ಶರತ್​ರ ಮೃತದೇಹ ಪತ್ತೆ!

KARNATAKA NEWS/ ONLINE / Malenadu today/ Jul 30, 2023 SHIVAMOGGA NEWS

ಕಳೆದ ಆರು ದಿನಗಳಿಂದ ಮಳೆಯ ನಡುವೆ ಕೊಲ್ಲೂರಿನ ಅರಶಿನ ಗುಂಡಿ ಫಾಲ್ಸ್ ನಲ್ಲಿ ಭದ್ರಾವತಿ ನಿವಾಸಿ ಶರತ್​ ಗಾಗಿ ನಡೆಯುತ್ತಿದ್ದ ಹುಡುಕಾಟ ತಾರ್ಕಿಕ ಅಂತ್ಯ ಕಂಡಿದೆ. ಇವತ್ತು ಮಳೆ ಕಡಿಮೆಯಾಗಿದ್ದರ ಹಿನ್ನೆಲೆಯಲ್ಲಿ ಜಲಪಾತದಲ್ಲಿ ನೀರಿನ ಹರಿವು, ರಭಸ ಎರಡು ಸಹ ಕಡಿಮೆಯಾಗಿತ್ತು. ಈ ಮಧ್ಯೆ ಕಾರ್ಯಾಚರಣೆ ನಡೆಸಿದ ರಕ್ಷಣಾ ತಂಡಕ್ಕೆ ಇವತ್ತು ಫಾಲ್ಸ್​ನಿಂದ 200 ಮೀಟರ್ ದೂರದಲ್ಲಿ  ಶರತ್​ ರವರ ಮೃತದೇಹ ಪತ್ತೆಯಾಗಿದೆ. 

BIG EXCLUSIVE / ಶರತ್​ಗಾಗಿ ಜ್ಯೋತಿರಾಜ್​ ಹುಡುಕಾಟ! ಡ್ರೋಣ್​ ಬಳಕೆ! ಹೇಗಿದೆ ನೋಡಿ ರೋಚಕ ಕಾರ್ಯಾಚರಣೆ!

ಕೊಲ್ಲೂರಿನ ಅರಿಶಿನ ಗುಂಡಿ ಜಲಪಾತ ವೀಕ್ಷಣೆಗೆ ಬಂದಾಗ ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು, ಕೊಚ್ಚಿ ಹೋಗಿದ್ದರು ಅವರಿಗಾಗಿ ನಿರಂತರ ಹುಡುಕಾಟ ನಡೆದಿತ್ತು.  ಧಾರಾಕಾರ ಮಳೆ, ಧುಮ್ಮುಕ್ಕಿ ಹರಿಯುತ್ತಿದ್ದ ಜಲಪಾತದಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು, ಈಶ್ವರ್ ಮಲ್ಪೆ ಹಾಗೂ ಜ್ಯೋತಿರಾಜ್​ ತಂಡ ಸ್ಥಳದಲ್ಲಿ ಹುಡುಕಾಟ ನಡೆಸಿತ್ತು. ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆ ರಕ್ಷಣಾ ಕಾರ್ಯಾಚರಣೆಯನ್ನ ಕೈಗೊಂಡಿತ್ತು. ಇವತ್ತು ಶರತ್​ರವರ ಮೃತದೇಹ ಪತ್ತೆಯಾಗಿದ್ದು, ಬಂಡೆಯ ಕೊರಕಲಿನ ನಡುವೆ ಮೃತದೇಹ ಸಿಕ್ಕಿಹಾಕಿಕೊಂಡಿರುವುದು ಕಾಣಿಸಿದೆ.

ಫಾಲ್ಸ್​ನಲ್ಲಿ ಜಾರಿ ಬಿದ್ದ ಯುವಕ ಇನ್ನೂ ನಾಪತ್ತೆ! ಬಂಡೆಗಳ ನಡುವೆ ಶರತ್​ಗೆ ಹುಡುಕುತ್ತಿರುವಾಗ ನಡೆಯಿತು ಮತ್ತೊಂದು ಘಟನೆ! 


ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಿಟ್​ ಆ್ಯಂಡ್​ ರನ್​ ಯುವಕ ಬಲಿ! ಏನಿದು ಘಟನೆ?

SHIVAMOGGA AIRPORT ಗೆ ಸಿಗಲಿದೆ ವಿಶೇಷ ಭದ್ರತೆ! ಗೋವಾ, ತಿರುಪತಿ, ಹೈದ್ರಾಬಾದ್​ಗೂ ಹಾರುತ್ತೆ ವಿಮಾನ! ಟಿಕೆಟ್ ದರದ ಬಗ್ಗೆ ಸಂಸದರು ಹೇಳಿದ್ದೇನು?

 

ಶಿವಮೊಗ್ಗ ಟಿವಿ ಟವರ್ ಗೆ ಎಫ್​ಎಂ ಟ್ರಾನ್ಸ್​ಮೀಟರ್ ಜೋಡಣೆ! ನಗರದಲ್ಲಿಯೇ ಕೇಳಲಿದೆ ಎಫ್​ಎಂ!? ಏನಂದ್ರು ಸಂಸದರು?

ಆರು ಚಿನ್ನದ ಪದಕದ ಜೊತೆಗೆ ರಾಜ್ಯದಲ್ಲಿಯೇ ಫಸ್ಟ್ RANK ಪಡೆದ ಶಿವಮೊಗ್ಗ ಯುವತಿ!

VIRAL TODAY / ಶಾಸಕರ ಬಾಯಿ ರುಚಿ ಮತ್ತು ಬೃಂದಾವನ್​ ಕ್ಯಾಂಟಿನ್​ ಮೆಣಸಿನ ಕಾಯಿ ಬೋಂಡಾ! ವೈರಲ್​ ಆಯ್ತು ಬೇಳೂರು ಹೇಳಿದ ಬಜ್ಜಿ ರೆಸಿಪಿ!

 

SHIVAMOGGA AIRPORT / ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್!

 ರೈಲ್ವೆ ಪ್ರಯಾಣಿಕರಿಗೆ ಸೂಚನೆ! ಜನಶತಾಬ್ದಿ ಸೇರಿ ಹಲವು ಟ್ರೈನ್​ಗಳ ಸಂಚಾರದಲ್ಲಿ ವ್ಯತ್ಯಯ! ವಿವರ ಇಲ್ಲಿದೆ






 ​