ಶಿವಮೊಗ್ಗ : ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಬಣವೆಯೆಲ್ಲಾ ಸುಟ್ಟುಹೋಗಿರುವ ಘಟನೆ ತಮ್ಮಡಿಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ ಪ್ರದೇಶದ ಭತ್ತದ ಪೈರು ನಾಶವಾಗಿದ್ದು, ರೈತನಿಗೆ ಸಾವಿರಾರು ರೂಪಾಯಿ ನಷ್ಟವಾಗಿದೆ.

ಇಂದು ಮಧ್ಯಾಹ್ನ ಸಂಭವಿಸಿದ ಈ ಅನಾಹುತದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳೀಯರು ಈ ದುರಂತಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸ್ಥಳೀಯರ ಪ್ರಕಾರ , ರಸ್ತೆಯ ಮೇಲೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವಂತೆ ಜೆಇಇ (Junior Engineer) ಮತ್ತು ಎಇಇ (Assistant Executive Engineer) ಅವರಿಗೆ ಒಂದು ತಿಂಗಳ ಹಿಂದೆಯೇ ಮನವಿ ಸಲ್ಲಿಸಲಾಗಿತ್ತು. ಆದರೆ, ಅಧಿಕಾರಿಗಳು ಈ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಲಕ್ಷ್ಯ ತೋರಿದ್ದೇ ಈ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುಮಾರು 1 ಎಕರೆಯಲ್ಲಿ ಕಷ್ಟಾಪಟ್ಟು ಬೆಳಿದಿದ್ದ 15 ಕ್ವಿಂಟಾಲ್ಗಿಂತಲೂ ಹೆಚ್ಚು ಭತ್ತ ಕೈಗೆ ಬಂದಿತ್ತಾದರೂ ಸಾಗಿಸುವಾಗ ವಿದ್ಯುತ್ ತಂತಿಯಿಂದಾಗಿ ಸುಟ್ಟುಹೋಗಿರುವುದು ರೈತನಿಗೆ ‘ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ’ ಎಂಬಂತಾಗಿದೆ.
Hanging Power Line Burns Paddy Load in Shivamoga








