SHIVAMOGGA NEWS TODAY

ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ ಕಂಬಳಿಯ ಜುಲ ಅನಾವರಣ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ : ಶಿವಮೊಗ್ಗದ ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆ 15 ರಂದು ಫ್ರೀಡಂ ಪಾರ್ಕ್​ನಲ್ಲಿ   ಆಯೋಜಿಸಲಾಗಿರುವ ರಾಷ್ಟ್ರಮಟ್ಟದ ಬೃಹತ್ ಟಗರು ಕಾಳಗಕ್ಕೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿವೆ. ಈ ಕ್ರೀಡಾಕೂಟದ ವಿಶೇಷ ಆಕರ್ಷಣೆಯಾದ ಕಂಬಳಿಯ ಜುಲವನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರು ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಅನಾವರಣಗೊಳಿಸಿದರು. 

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದ ಪೋಸ್ಟರ್ ಬಿಡುಗಡೆ, ಶಿವಮೊಗ್ಗಕ್ಕೆ ಬರ್ತಿದ್ದಾರೆ ವರ್ತೂರು ಸಂತೋಷ್​

ಸಂಗೊಳ್ಳಿ ರಾಯಣ್ಣ, ವೀರ ಶಿವಪ್ಪ ನಾಯಕ, ಭಗೀರಥ ಹಾಗೂ ವೀರ ಸಿಂಧೂರ ಲಕ್ಷ್ಮಣ ಬಿರುದಾಂಕಿತ ಈ ಜುಲವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ನಲಪಾಡ್ ಅವರು, ಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಅವಿಭಾಜ್ಯ ಅಂಗವಾಗಿವೆ. ನಮ್ಮೂರ ಬಳಗ ಹಮ್ಮಿಕೊಂಡಿರುವ ಈ ಟಗರು ಕಾಳಗವು ಜನರ ಉತ್ಸಾಹವನ್ನು ಹೆಚ್ಚಿಸಿದೆ. ಶಿವಮೊಗ್ಗದ ಮಾರಿಕಾಂಬಾ ಜಾತ್ರೆಯ ಅಂಗವಾಗಿ ನಡೆಯುವ ಈ ಕ್ರೀಡಾಕೂಟವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

Mohammed Harris Nalapad Unveils Tagaru Kalaga Kambali Jula
Mohammed Harris Nalapad Unveils Tagaru Kalaga Kambali Jula

Harris Nalapad Unveils Tagaru Kalaga Kambali Jula

shivamogga car decor sun control house
shivamogga car decor sun control house
END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.