Heart attack ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಯುವಕ ಹೃದಯಾಘಾತದಿಂದ ಸಾವು
ಸಾಗರ: ದಾವಣಗೆರೆಯಿಂದ ಸಾಗರದ ಸಿಗಂದೂರು ದೇವಸ್ಥಾನಕ್ಕೆ ತನ್ನ ಸ್ನೇಹಿತನ ಜೊತೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ 29 ವರ್ಷದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಈ ಘಟನೆ ತಾಲ್ಲೂಕಿನ ಬಲಸಗೋಡು ಗ್ರಾಮದ ಬಳಿ ನಡೆದಿದೆ.
ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರ ಅವರ ಹಿರಿಯ ಪುತ್ರ ಕೆ.ಆಕರ್ಷ್ (29) ಮೃತಪಟ್ಟ ಯುವಕ. ಆಕರ್ಷ್ ಅವರು ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ಹರೀಶ್ ಬಸಾಪುರ ಅವರ ಸಹೋದರನ ಮಗ ಎಂದು ತಿಳಿದುಬಂದಿದೆ.
ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
