KARNATAKA NEWS/ ONLINE / Malenadu today/ Oct 15, 2023 SHIVAMOGGA NEWS
ಕುಡಿದು ಟೈಟಾಗಿ ಪತ್ನಿಯನ್ನೆ ಪತಿಯೊಬ್ಬ ಕೊಲೆಗೈದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ನಡೆದಿದೆ.
ಪತ್ನಿಯನ್ನೆ ಕೊಂದ ಪತಿ
ಇಲ್ಲಿನ ನಿವಾಸಿ ಚಂದ್ರ ಕೊಲೆ ಮಾಡಿರುವ ವ್ಯಕ್ತಿ. ಪತ್ನಿ ಪದ್ಮಾಕ್ಷಿ ಜೊತೆಗೆ ಈತ ಆಗಾಗ ಜಗಳ ತೆಗೆಯುತ್ತಿದ್ದ. ಆಕೆಗೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸ್ತಿದ್ದ. ಇದೇ ವಿಚಾರಕ್ಕೆ ಗಲಾಟೆ ನಡೆದು. ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿ, ಆಕೆಯನ್ನ ಮನೆಯಿಂದ ಹೊರಹಾಕಿ ಮಲಗಿದ್ದಾನೆ.
ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಹಲ್ಲೆ ಮಾಡಿದ ಪತಿರಾಯ, ಬೆಳಗ್ಗೆ ಎದ್ದು ನೋಡುವಾಗ ಆಕೆ ಸಾವನ್ನಪ್ಪಿರುವುದು ಕಂಡು ಆತಂಕಗೊಂಡಿದ್ದಾನೆ. ಪತ್ನಿಯ ಶವದ ಮುಂದೆ ಕುಳಿತು ಕಣ್ಣೀರು ಹಾಕಿದ್ದಾನೆ. ಸದ್ಯ ಪ್ರಕರಣ ಸಂಬಂಧ ಗೋಣಿ ಬೀಡು ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಎರಡು ಕಾರುಗಳ ನಡುವೆ ಡಿಕ್ಕಿ
ಚಿಕ್ಕಮಗಳೂರು ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿವೆ. ಹೊರನಾಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇನ್ನಷ್ಟು ಸುದ್ದಿಗಳು