ಎರಡು ಬೈಕ್​ಗಳ ನಡುವೆ ಡಿಕ್ಕಿಯಾದ ಬೆನ್ನಲ್ಲೆ ಲಾರಿ ಹರಿದು ಮೂವರ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಹೊಳೆಹೊನ್ನೂರಲ್ಲಿ ನಡೆದಿದ್ದೇನು?

Here is the full details of the incident that took place near Holehonurಹೊಳೆಹೊನ್ನೂರು ಬಳಿ ನಡೆದ ಘಟನೆಯ ಪೂರ್ಣ ವಿವರ ಇಲ್ಲಿದೆ

ಎರಡು ಬೈಕ್​ಗಳ  ನಡುವೆ ಡಿಕ್ಕಿಯಾದ ಬೆನ್ನಲ್ಲೆ ಲಾರಿ ಹರಿದು ಮೂವರ ಸಾವು! ಇನ್ನೊಬ್ಬನ ಸ್ಥಿತಿ ಗಂಭೀರ! ಹೊಳೆಹೊನ್ನೂರಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’ 



ಶಿವಮೊಗ್ಗ ಜಿಲ್ಲೆ  ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್-ಅರಹತೊಳಲು ಬಳಿ ನಿನ್ನೆ (ಶನಿವಾರ) ರಾತ್ರಿ ಲಾರಿ ಹಾಗೂ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡ ಮೃತ ದೇಹಗಳು ಗುರುತು ಸಿಗದಷ್ಟು ಛಿದ್ರವಾಗಿವೆ. ಲಾರಿ ಚಾಲಕ ಪರಾರಿಯಾಗಿದ್ದಾನೆ

ಒಂದೇ ಬೈಕ್‌ನಲ್ಲಿ ಪ್ರಯಾ ಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವುಕಂಡಿದ್ದಾರೆ, ಮೃತ ಯುವಕರು ವಿಕಾಸ್ (18), ಯಶ್ವಂತ‌(17) ಶಶಾಂಕ (17) ಮತ್ತೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಭದ್ರಾವತಿ ತಾಲೂಕು ಅರದೊಟ್ಟು ಗ್ರಾಮದ ಗಗನ್‌ಗೆ ಭಾರಿ ಪೆಟ್ಟು ಬಿದ್ದಿದೆ. ಕೈ-ಕಾಲುಗಳನ್ನು ಕಳೆದುಕೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಹಾಗೂ ಮೃತರು ಕಲ್ಲಿಹಾಳ್ ಕಡೆಯಿಂದ ಅರಹತೊಳಲು ಕೈಮರದ ಕಡೆ ಹೋಗುತ್ತಿದ್ದರು. ಎದುರಿನಿಂದ ಇನ್ನೊಂದು ಬೈಕ್​ನಲ್ಲಿ  ಗಗನ್​ ಬೈಕ್​ನಲ್ಲಿ ಬರುತ್ತಿದ್ದ. ಈ ವೇಳೆ ಬೈಕ್​ ಲಾರಿ ಜೊತೆ ಬರುತ್ತಿದ್ದ ಬೈಕ್​ಗೆ ಡಿಕ್ಕಿಯಾಗಿದೆ. ಪರಿಣಾಮ ಕೆಳಕ್ಕೆ ಬಿದ್ದವರ ಮೇಲೆ ಲಾರಿಯು ಹರಿದಿದೆ. ಪರಿಣಾಮ  ಮೂವರು ಸ್ಥಳದಲ್ಲಿ ಸಾವನ್ನಪ್ಪಿದರೇ, ಇನ್ನೊಬ್ಬನ ಕೈಕಾಲಿಗೆ ಗಂಭೀರ ಏಟಾಗಿದೆ.  


ಇನ್ನಷ್ಟು ಸುದ್ದಿಗಳು 

  1. ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಬೆಳಗಿನ ಜಾವ ಧಗಧಗ ಹೊತ್ತಿ ಉರಿದ ಮರ! ಏನಿದು ಘಟನೆ

  2. ವಿಐಎಸ್​ಎಲ್​​ ಆವರಣದಲ್ಲಿ ಕಾಣಿಸಿಕೊಳ್ತು ಮತ್ತೊಂದು ಚಿರತೆ!

  3. ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬೆಂಗಳೂರಿಗೆ ಹೋಗುತ್ತಿದ್ದಾಗ ಶಾಕ್! ಸೂಡೂರು ಸಮೀಪ ಆಕ್ಸಿಡೆಂಟ್!