ಚೋರಡಿಯಲ್ಲಿ ಅಪಘಾತ/ ಮೆಗ್ಗಾನ್ ಆಸ್ಪತ್ರೆಗೆ ಬಿವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ ದೌಡು/ ಸಾವು ನೋವಿನ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಕೊಟ್ಟ ನಿಖರ ಮಾಹಿತಿ ಇಲ್ಲಿದೆ
Here's the exact information given by SP Mithun Kumar about the accident at Choradi/ BY Raghavendra, B Y Vijayendra Visit at Meggan Hospital

KARNATAKA NEWS/ ONLINE / Malenadu today/ May 11, 2023 GOOGLE NEWS ಗ ಶಿವಮೊಗ್ಗ, ಇಲ್ಲಿನ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಗೆ ದೌಡಾಯಿಸಿದ ಬಿವೈ ವಿಜಯೇಂದ್ರ ಹಾಗೂ ಬಿವೈ ರಾಘವೇಂದ್ರ
ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಹಾಗೂ ಬಿವೈ ವಿಜಯೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಗಾಯಾಳುಗಳ ಬಳಿಯಲ್ಲಿ ಘಟನೆಯ ಮಾಹಿತಿ ಪಡೆದ ಇಬ್ಬರು ಸಹೋದರರು, ಚಿಕಿತ್ಸೆಯ ವ್ಯವಸ್ಥೆಯನ್ನು ಗಮನಿಸುತ್ತಿದ್ದಾರೆ.
ಚೋರಡಿಯಲ್ಲಿ ಭೀಕರ ಅಪಘಾತ ಮೂವರ ಸಾವು 50ಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯ https://t.co/3ONs5ejylL #ShivamoggaNews #shivamogga #Shimoga #MalnadNews #LocalNews #KannadaNewsWebsite #LatestNews #todaynewsheadlinesofworld, #newstoday #kannadaonlinenews pic.twitter.com/fyuYIQWDhI — malenadutoday.com (@CMalenadutoday) May 11, 2023
Read/ Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು?
ಇನ್ನೂ ಘಟನೆ ಬಗ್ಗೆ ವಾಟ್ಸ್ಯಾಪ್ ಮೂಲಕ ಮಾಹಿತಿ ನೀಡಿರುವ ಎಸ್ಪಿ ಮಿಥುನ್ಕುಮಾರ್ ಇದುವರೆಗೂ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹೊಸದುರ್ಗದ ತಿಪ್ಪೇಸ್ವಾಮಿ ಹಾಗು ಇನ್ನೊಬ್ಬರು ಅಪರಿಚಿತ ಪುರುಷ ಎಂದು ತಿಳಿಸಿದ್ದಾರೆ.
BY Raghavendra, B Y Vijayendra Visit at Meggan Hospital #ShivamoggaNews #shivamogga #Shimoga #MalnadNews #LocalNews #KannadaNewsWebsite #LatestNews #todaynewsheadlinesofworld, #newstoday #kannadaonlinenews pic.twitter.com/CcOp3bW5AH — malenadutoday.com (@CMalenadutoday) May 11, 2023
BY Raghavendra, B Y Vijayendra Visit at Meggan Hospital #ShivamoggaNews #shivamogga #Shimoga #MalnadNews #LocalNews #KannadaNewsWebsite #LatestNews #todaynewsheadlinesofworld, #newstoday #kannadaonlinenews pic.twitter.com/CcOp3bW5AH — malenadutoday.com (@CMalenadutoday) May 11, 2023
ಇನ್ನೂ 30 ಮಂದಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು, ನಾಲ್ವರನ್ನ ಆಯನೂರಿನ ಸಿಹೆಚ್ಸಿಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದ್ದು, ಅವರನ್ನು ಸಹ ಮೆಗ್ಗಾನ್ಗೆ ಶಿಪ್ಟ್ ಮಾಡಲಾಗುತ್ತಿದೆ. ಇನ್ನೂ ಮೂವರ ಸ್ಥಿತಿಯು ಗಂಭೀರವಾಗಿದ್ದು, 6 ಜನರಿಗೆ ಮೈನರ್ ಇಂಜುರಿಯಾಗಿದೆ ಎಂದು ತಿಳಿಸಿದ್ದಾರೆ.
Read/ Kichcha Sudeepa/ ನಟ ಸುದೀಪ್ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
Malenadutoday.com Social media