ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ?

Hindu leader Arun Kumar Putthila visited Ragigudda in Shimogaಶಿವಮೊಗ್ಗದ ರಾಗಿಗುಡ್ಡಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಭೇಟಿಕೊಟ್ಟಿದ್ಧಾರೆ

ರಾಗಿಗುಡ್ಡಕ್ಕೆ ಬಂದ ಪುತ್ತೂರು ಫೈರ್​ ಬ್ರ್ಯಾಂಡ್​ ಅರುಣ್ ಕುಮಾರ್ ಪುತ್ತಿಲ! ಏನಂದ್ರು ಗೊತ್ತಾ?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನಡೆದ ಘಟನೆ ಬಳಿಕ ,ಅಲ್ಲಿಗೆ ಬಂದು ಹೋಗುವವರ ಸಂಖ್ಯೆ ಹೆಚ್ಚಿದೆ. ಬಿಜೆಪಿ ನಿಯೋಗದ ಬೆನ್ನಲ್ಲೆ ಇದೀಗ ಬಿಜೆಪಿಯಲ್ಲಿ ರೆಬಲ್ ಆಗಿ ಗುರುತಿಸಿಕೊಂಡ ಅರುಣ್ ಕುಮಾರ್ ಪುತ್ತಿಲ ಮತ್ತವರ ತಂಡ ಆಗಮಿಸಿ, ಸಂತ್ರಸ್ತರನ್ನು ಮಾತನಾಡಿಸಿದೆ. 

ರಾಗಿಗುಡ್ಡದಲ್ಲಿ ಸಂತ್ರಸ್ತರ ಅಳಲನ್ನು ಆಲಿಸಿದ ಅವರು, ಬಳಿಕ ಮಾತನಾಡಿ  ಆಯುಧ ಪೂಜೆಯ ದಿನ ಆಯುಧಗಳಿಗೆ ಪೂಜೆ ಮಾಡಿಟ್ಟುಕೊಳ್ಳಿ ಮುಂದಿನ ದಿನಗಳಲ್ಲಿ ಕೆಲಸಕ್ಕೆ ಬರಲಿದೆ ಎಂದಿದ್ದಾರೆ.ನೊಂದವರ ಮನೆಗೆ ಬಂದು ಸಾಂತ್ವನ ಹೇಳಿದ್ದೇನೆ. ಹಿಂದೂಗಳ ಜೊತೆಗೆ ನಾವಿದ್ದೇವೆ ಎಂದಿದ್ದಾರ.ಎ 

ಮುಸ್ಲಿಂ ಮತ ಪಡೆಯಲು ಸರ್ಕಾರ ಮತಾಂಧತೆಗೆ ಬೆಂಬಲ ನೀಡುತ್ತಿದ್ದು, ರಾಗಿಗುಡ್ಡದಲ್ಲಿ ನಡೆದ ಘಟನೆ ನಿಯೋಜಿತ ಕೃತ್ಯವೆಂದಿದ್ದಾರೆ. ಶಿಕ್ಷಕರ ಮನೆಗೆ ನುಗ್ಗಿ ವಿದ್ಯಾರ್ಥಿಗಳು ದಾಂಧಲೆ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದ ಅವರು,  ತಲ್ವಾರ್ ಹಿಡಿದು ಮೆರವಣಿಗೆಗೆಯಲ್ಲಿ ಸಾಗಲು ಅವಕಾಶ ನೀಡುವುದಾದರೆ,  ಮಾರಕಾಸ್ತ್ರ ಹಿಡಿದು ಹಿಂದು ಸಮಾಜದ ಮೇಲೆ, ಹಿಂದು‌ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಸಹಕಾರ ಕೊಡಲಾಗುತ್ತಿದೆಯಾ ಎಂಬ ಅನುಮಾನ ಮೂಡುತ್ತಿದೆ ಎಂದಿದ್ದಾರೆ. 

ನಮ್ಮಲ್ಲೂ  ಶಸ್ತ್ರಾಸ್ತ್ರ ಇದೆ ಅಗತ್ಯ ಬಿದ್ದರೆ ಇದೇ ಶಸ್ತ್ರಗಳ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದು ಸಮಾಜ ಸಿದ್ದವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು ಎಂದಿದ್ದಾರೆ 




ಇನ್ನಷ್ಟು ಸುದ್ದಿಗಳು 

  1.  R M MANJUNATH GOWDA ರವರ ಮನೆಗಳ ಮೇಲೆ ED ದಾಳಿಗೆ ಕಾರಣವೇನು? ಏನಿದು ಪ್ರಕರಣ?

  2. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು ಮಹತ್ವದ ಪ್ರಕಟಣೆ! ಶಿವಮೊಗ್ಗದಲ್ಲಿಯೇ ನೋಂದಣಿ ಮಾಡಿಕೊಳ್ಳಿ

  3. ಶಿವಮೊಗ್ಗ ಮತ್ತೆ ಆಗುತ್ತಾ ಪವರ್ ಸೆಂಟರ್! ನವರಾತ್ರಿ ನಂತರ ಏನಾಗುತ್ತೆ? ರಾಜ್ಯ ರಾಜಕಾರಣದ ಕುತೂಹಲದ ಸುದ್ದಿ