
ಹಲೋ ಮಧು, ಖುಷಿಯಾಯ್ತು! ಸಚಿವರಿಗೆ ಕರೆ ಮಾಡಿದ ಕಾಗೋಡು ತಿಮ್ಮಪ್ಪ! ಬೇಳೂರು ಗೋಪಾಲಕೃಷ್ಣರಿಗೂ ಮಾತನಾಡಿದ್ರು!
Kagodu Thimmappa / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ನಡುವೆ, ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರು ಇಬ್ಬರು ಪ್ರಮುಖ ನಾಯಕರಿಗೆ ದೂರವಾಣಿ ಕರೆ ಮಾಡಿ ಮಾತನಾಡಿರುವ ವಿಡಿಯೋವೊಂದು ಇದೀಗ ಹೊರಬಿದ್ದಿದೆ. ನೂತನ ಸಚಿವರಾಗಿರುವ ಮಧು ಬಂಗಾರಪ್ಪ ಹಾಗೂ ಸಚಿವ ಸ್ಥಾನ ಕೈತಪ್ಪಿ ಅಸಮಾಧಾನಗೊಂಡಿರುವ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಕಾಗೋಡು ತಿಮ್ಮಪ್ಪ ಅವರು ಪ್ರತ್ಯೇಕವಾಗಿ



