STATE NEWS

ಗುಡ್​​ ಪ್ರೈಡೇ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ : ನೂರಾರು ಭಕ್ತರಿಗೆ ಕಡಿದ ಹೆಜ್ಜೇನು

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ :  ಶಿವಮೊಗ್ಗದ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಹೆಜ್ಜೇನು ದಾಳಿ ಮಾಡಿದ ಪರಿಣಾಮ ನೂರಾರು ಭಕ್ತರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

ಇಂದು ಗುಡ್​ ಪ್ರೈಡೇ ಹಬ್ಬದ ಪರಿಣಾಮ ಶಿವಮೊಗ್ಗ ಸಕ್ರೇಡ್​ ಹಾರ್ಟ್​ ಚರ್ಚ್​ನಲ್ಲಿ  ಶಿಲುಬೆ ಹಾದಿ ಹಮ್ಮಿಕೊಳ್ಳಲಾಗಿತ್ತು  ಈ ವೇಳೆ ಸಾವಿರಾರು ಜನ ಭಕ್ತರು ಚರ್ಚನ ಆವರಣದಲ್ಲಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನು ದಾಳಿ ನಡೆದಿದೆ. ನೂರಾರು ಜನರ ಮೇಲೆ ಹೆಜ್ಜೇನು ದಾಳಿ ಮಾಡಿದ್ದರಿಂದ ಜನರು ಭಯಭೀತರಾದರು.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ 

ಹೆಜ್ಜೇನು ದಾಳಿಯಿಂದ ಪಾರಾಗಲು ಚರ್ಚ್​ನ ಒಳಗೆ ಹೋಗಿ ಬಾಗಿಲು ಹಾಕಿಕೊಂಡರು. ಅಷ್ಟರಲ್ಲಾಗಲೇ ನೂರಾರು ಜನರಿಗೆ ಹೆಜ್ಜೇನು ದಾಳಿ ಮಾಡಿತ್ತು. ಹೆಜ್ಜೇನು ದಾಳಿಗೆ ಒಳಗಾದವರನ್ನು ಆ್ಯಂಬುಲೆನ್ಸ್​ ಮೂಲಕ ಚರ್ಚ್​​​ನ ಸಮೀಪವಿರುವ ಅಶೋಕ ಸಂಜೀವಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತು. ಹೊಗೆ ಹಾಕುವ ಮೂಲಕ ಹೆಜ್ಜೇನು ಓಡಿಸುವ ಪ್ರಯತ್ನ ಮಾಡಲಾಯಿತು. ಚರ್ಚ್​​ನ ಫಾದರ್​​​ಗೂ ಹೆಜ್ಜೇನು ದಾಳಿ ಮಾಡಿವೆ.

ಕಳೆದ ಕೆಲ ದಿನಗಳ ಹಿಂದೆ ಚರ್ಚ್​​​ನ ಆವರಣದಲ್ಲಿರುವ ಮರಗಳಲ್ಲಿ ಹೆಜ್ಜೇನು ಗೂಡು ಕಟ್ಟಿದ್ದವು. ಆದರೆ ಹಬ್ಬದ ಹಿನ್ನಲೆಯಲ್ಲಿ ಗೂಡುಗಳನ್ನು ತೆರವು ಮಾಡಲಾಗಿತ್ತು ಎನ್ನಲಾಗಿದೆ,  ಹೆಜ್ಜೆನು ದಾಳಿಯ ಹಿನ್ನೆಲೆಯಲ್ಲಿ ಶಿಲುಬೆ ಹಾದಿ  ಅರ್ಧಕ್ಕೆ ನಿಂತಿತು. ಹೆಜ್ಜೇನು ದಾಳಿಗೆ ಒಳಗಾದರೂ ಸಹ ಭಕ್ತರು ಪ್ರಾರ್ಥನೆಯನ್ನು ಪೂರ್ಣಗೊಳಿಸಿದರು.

Honeybee Attack at Sacred Heart Church Shimoga

Honeybee Attack at Sacred Heart Church Shimoga
Honeybee Attack at Sacred Heart Church Shimoga

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.