SHIVAMOGGA NEWS TODAY

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೊಸನಗರ: ಜಿಲ್ಲೆಯ ಹೊಸನಗರ ತಾಲೂಕಿನ ಬ್ರಾಹ್ಮಣ ತರುವೆ ಗ್ರಾಮದ ಚಕ್ರೆ ಎಂಬಲ್ಲಿ ದುಷ್ಕರ್ಮಿಗಳು 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡೆದು ಹಾಕಿರುವ ಘಟನೆ ಸಂಭವಿಸಿದೆ.

ಮೇ 9 ಹಾಗೂ 10ರಂದು ನಗರದಲ್ಲಿ ಶಿವಮೊಗ್ಗ ಸಾಹಿತ್ಯ ಹಬ್ಬ, ಏನೆಲ್ಲಾ ಕಾರ್ಯಕ್ರಮ ಇರಲಿದೆ

ಘಟನೆ ವಿವರ: ಚಕ್ರೆಯ ನಾರಾಯಣ ಮೂರ್ತಿ ಎಂಬುವವರಿಗೆ ಸೇರಿದ ಅಡಿಕೆ ತೋಟಕ್ಕೆ ಮಧ್ಯರಾತ್ರಿ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕತ್ತರಿಸಿದ್ದಾರೆ. ಅಷ್ಟೇ ಅಲ್ಲದೆ, ತೋಟಕ್ಕೆ ಅಳವಡಿಸಲಾಗಿದ್ದ ಜೆಟ್ ಪೈಪ್ ಸೇರಿದಂತೆ ಇನ್ನಿತರ ವಸ್ತುಗಳನ್ನು ನಾಶಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hosanagara 60 Areca Nut Trees Destroyed

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.