Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮ ಪತ್ನಿ ವೀಣಾ ಅವರನ್ನು ಕಚೇರಿಗೆ ಬಿಟ್ಟು ವಾಪಸ್ ನಗರಕ್ಕೆ ಬಂದಿದ್ದರು. ತದನಂತರ ಕೆಲಸದ ನಿಮಿತ್ತ ಬಸವನಬ್ಯಾಣದ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ಮಾರ್ಗಮಧ್ಯೆ ಈ ದುರ್ಘಟನೆ ನಡೆದಿದೆ.

ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ
ಸೇತುವೆಯ ಕೆಳಗಿನ ಹಿನ್ನೀರಿನಲ್ಲಿ ಬೈಕ್ ಹಾಗೂ ವ್ಯಕ್ತಿಯ ಮೃತದೇಹ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಈ ವಿಷಯವನ್ನು ಸಂಬಂಧಪಟ್ಟವರಿಗೆ ತಿಳಿಸಿದ್ದರಿಂದ ಘಟನೆ ಬಗ್ಗೆ ಗೊತ್ತಾಗಿದೆ. ಇನ್ನೂ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ನಗರ ಠಾಣೆಯ ಪೊಲೀಸರು ಉಕ್ಕಡದ ಮೂಲಕ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ದಡಕ್ಕೆ ತಂದಿದ್ದಾರೆ. ನಂತರ ನೀರಿನಲ್ಲಿದ್ದ ಬೈಕ್ ಅನ್ನು ಸಹ ಮೇಲಕ್ಕೆತ್ತಲಾಗಿದೆ. ಈ ಸಂಬಂಧ ಮೃತರ ಪತ್ನಿ ವೀಣಾ ಅವರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರನ್ನು ಸ್ವೀಕರಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ವಿಧಾನಸಭಾ ಕ್ಷೇತ್ರಕ್ಕಾಗಿ ಹೊಸನಗರದಲ್ಲಿ ಹೊಸದಾಗಿ ಹೋರಾಟ ! ಶುರು ಅಭಿಯಾನ
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ಹೊಸನಗರ ತಾಲ್ಲೂಕಿನಲ್ಲಿ ಖಾಸಗಿ ಬಸ್ ಮತ್ತು ಒಮಿನಿ ನಡುವೆ ಡಿಕ್ಕಿ
ಹೊಸನಗರ ದುರಂತ: ಸೇತುವೆಯಿಂದ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು Hosanagara Tragedy: Retired Headmaster Dies Falling from Bridge, ಸೋಮವಾರ ಪೇಟೆ, ನಗರ,

