ಹೊಸನಗರದಲ್ಲಿ ಗೋಮೂತ್ರ, ಸಗಣಿ ನೀರು ಸುರಿದುಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರ ಪ್ರತಿಭಟನೆ ! ಕಾರಣವೇನು ಗೊತ್ತಾ?

In Hosanagara, gram panchayat president protests by pouring cow urine, cow dung water Do you know the reason?

ಹೊಸನಗರದಲ್ಲಿ ಗೋಮೂತ್ರ, ಸಗಣಿ ನೀರು ಸುರಿದುಕೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರ ಪ್ರತಿಭಟನೆ ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ May 26, 2023 SHIVAMOGGA NEWS

ಹೊಸನಗರ/ ನಿರ್ಲಕ್ಷ್ಯ ಒಳಗಾದ ಹೊಸನಗರ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದ್ದಿದೆ. ಈ ಮಧ್ಯೆ ಟ್ಯಾಂಕರ್​ಗಳಲ್ಲಿ ಹಳ್ಳಿಹಳ್ಳಿಗೆ ನೀರಿ ಸೌಕರ್ಯಗಳನ್ನ ಒದಗಿಸಲಾಗುತ್ತಿದೆಯಾದರೂ, ಅದರ ಬಿಲ್​ ಮಂಜೂರಾತಿ ಆಗುತ್ತಿಲ್ಲ. ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿರುವ ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಾಕರ್ ಶೆಟ್ಟಿ ಇವತ್ತು ಹೊಸನಗರ ತಾಲ್ಲೂಕು ಪಂಚಾಯಿತಿ ಎದುರು ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ ನಡೆಸಿದ್ದಾರೆ. 

ಈ ಹಿಂದೆ ತಾಲ್ಲೂಕು ಪಂಚಾಯಿತಿಯಲ್ಲಿ ಕಸಗುಡಿಸಿ ಪ್ರತಿಭಟಿಸಿದ್ದ ಕರುಣಾಕರ್ ಶೆಟ್ಟರು, ಈ ಸಲ ಇಡೀ ತಾಲ್ಲೂಕಿಗೆ ಕುಡಿಯುವ ನೀರಿನ ಸೌಕರ್ಯ ಒದಗಿಸಲು, ಹಣ ಮಂಜೂರು ಏಕೆ ಮಾಡುತ್ತಿಲ್ಲ. ಹೊಸನಗರಕ್ಕೆ ಮಾತ್ರವೇ ಈ ನಿರ್ಲಕ್ಷ್ಯವೇ ಏಕೆ ಎಂದು ಪ್ರಶ್ನಿಸಿದ್ದಾರೆ. ಜನರು ಕುಡಿಯುವ ನೀರು ಒದಗಿಸಿ ಎಂದು ಪ್ರಶ್ನಿಸುತ್ತಾರೆ. ಆದರೆ ಪಂಚಾಯಿತಿಗಳಿಗೆ ಹಣ ಒದಗಿಸುತ್ತಿಲ್ಲ. ನೀರಿನ ಟ್ಯಾಂಕರ್​ಗಳ ಮೂಲಕ ನೀರು ಒದಗಿಸಲು ಸಾಧ್ಯವಾಗದೇ, ಜನರಿಂದ ಮಾತು ಕೇಳಬೇಕಾದ ಸನ್ನಿವೇಶವಿದೆ ಎಂದು ಅಳಲು ತೋಡಿಕೊಂಡಿದ್ಧಾರೆ. 

ಕಳೆದ ಒಂದುವರೆ ತಿಂಗಳಿನಿಂದ ಮನೆ ಮನೆಗೆ ನೀರನ್ನ ಟ್ಯಾಂಕರ್ ಮೂಲಕ ಒದಗಿಸಲಾಗಿದೆ. ಈ ಮಧ್ಯೆ   ಜಿಲ್ಲಾಡಳಿತ ನಡೆಸಿದ ಟಾಸ್ಕ್​ ಫೋರ್ಸ್ ಸಭೆಯಲ್ಲಿ, ಪ್ರತಿ ತಾಲ್ಲೂಕಿಗೆ 15 ಲಕ್ಷ ರೂಪಾಯಿ ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ಧರು. ನೀರಿನ ಸೌಲಭ್ಯ ಒದಗಿಸಿ ಎಂದು ಹೇಳಿದ್ದರು. ಆದರೆ ಇದುವರೆಗೂ ಬಿಡಿಗಾಸನ್ನು ಸಹ ನೀಡಿಲ್ಲ . ಈ ಬಗ್ಗೆ ಅಧಿಕಾರಿಗಳನ್ನ ಕೇಳಿದರೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಆದರೆ ನಾವು ಜನರಿಗೆ ಮುಖ ತೋರಿಸಲು ಆಗುತ್ತಿಲ್ಲ. ನಾವಿಲ್ಲಿ ಶುದ್ಧವಾಗಿದ್ದೇವೆ , ನಾವು ಶುದ್ಧವಾಗಿದ್ದೇವೆ ಎನ್ನುವುದನ್ನ ತೋರಿಸುವುದ್ದಕ್ಕಾಗಿಯೇ ಕಚೇರಿ ಮುಂದೆ ಸಗಣಿ ನೀರನ್ನ ಸುರಿದುಕೊಂಡು ಶುದ್ಧವಾಗಿದ್ದೇನೆ. ಹಾಗಾಗಿ ಅಧಿಕಾರಿಗಳನ್ನು ಪ್ರಶ್ನಿಸುತ್ತಿದ್ದೇನೆ ಎಂದು ಆಕ್ರೋಶ ಹೊರಹಾಕಿದ್ಧಾರೆ. 

ಇನ್ನೂ ಕರುಣಾಕರ್​ ಶೆಟ್ಟರ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಉಪವಿಭಾಗೀಯ ಅಧಿಕಾರಿಯವರು ಹೊಸನಗರ ತಾಲ್ಲೂಕಿಗೆ,  ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಗೆ 20 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಈ ಪೈಕಿ 10 ಲಕ್ಷ ರೂಪಾಯಿ ಅನುದಾನ ಮೊದಲ ಕಂತಿನಲ್ಲಿ ಬಂದಿದೆ. ನಗರ ಪಂಚಾಯ್ತಿಯಿಂದಲೇ ಮೊದಲು ಹಣ ಬಿಡುಗಡೆ ಮಾಡಿ, ಕುಡಿಯುವ ನೀರಿನ ಸೌಕರ್ಯಕ್ಕೆಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಈಹಿನ್ನೆಲೆಯಲ್ಲಿ ಕರುಣಾಕರ್ ಶೆಟ್ಟರು ಪ್ರತಿಭಟನೆಯನ್ನ ಕೈ ಬಿಟ್ಟಿದ್ಧಾರೆ. 

 

ಓವರ್​ ಟೇಕ್ ಮಾಡುವಾಗ ಆಕ್ಸಿಡೆಂಟ್! ಬೈಕ್​ ಸವಾರ ಸ್ಥಳದಲ್ಲಿಯೇ ಸಾವು!