ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!
In Shimoga, discontent in the Congress has been resolved
![ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!](https://malenadutoday.com/uploads/images/202304/image_750x_64473b479d659.jpg)
KARNATAKA NEWS/ ONLINE / Malenadu today/ Apr 24, 2023 GOOGLE NEWS
ಶಿವಮೊಗ್ಗ/ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್ ಸಿಕ್ಕಿದ್ದಂತಾಗಿದೆ.
ಕಾಂಗ್ರೆಸ್ನಿಂದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.
ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ.
ಈ ಮೊದಲು ಟಿಕೆಟ್ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, ರವಿಕುಮಾರ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿ ನಾಮಪತ್ರ ಸಲ್ಲಿಸಿದ್ದರು.
ಇದೀಗ ಪಕ್ಷದ ನಾಯಕರು ಅಸಮಾಧಾನವನ್ನು ಶಮನಗೊಳಿಸಿ ನಾಮಪತ್ರ ಹಿಂಪಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
-
Read/ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಟೂರಿಸ್ಟ್ ಬಸ್ ಪಲ್ಟಿ! ಓರ್ವರ ಸಾವು/ 20 ಕ್ಕೂ ಹೆಚ್ಚು ಮಂದಿಗೆ ಗಾಯ!
Malenadutoday.com Social media