ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!

In Shimoga, discontent in the Congress has been resolved

ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!
ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!

KARNATAKA NEWS/ ONLINE / Malenadu today/ Apr 24, 2023 GOOGLE NEWS


ಶಿವಮೊಗ್ಗ/  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್​ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ  ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್‌ ಸಿಕ್ಕಿದ್ದಂತಾಗಿದೆ. 

 ಕಾಂಗ್ರೆಸ್​ನಿಂದ ಬಂಡಾಯವೆದ್ದು  ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. 

 

ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ. 

 

ಈ ಮೊದಲು ಟಿಕೆಟ್‌ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, ರವಿಕುಮಾರ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತೀರ್ಮಾನಿಸಿ ನಾಮಪತ್ರ ಸಲ್ಲಿಸಿದ್ದರು.

 

 ಇದೀಗ ಪಕ್ಷದ ನಾಯಕರು ಅಸಮಾಧಾನವನ್ನು ಶಮನಗೊಳಿಸಿ ನಾಮಪತ್ರ ಹಿಂಪಡೆಸುವಲ್ಲಿ ಯಶಸ್ವಿಯಾಗಿದ್ದಾರೆ. 

  

Malenadutoday.com Social media