KARNATAKA NEWS/ ONLINE / Malenadu today/ Oct 21, 2023 SHIVAMOGGA NEWS
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಬಣಕಲ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಿಂತಿದ್ದ ಗೂಡ್ಸ್ ವೆಹಿಕಲ್ಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಗೂಡ್ಸ್ ವಾಹನ ಪಲ್ಟಿಯಾಗಿದ್ದು, ಅದರಲ್ಲಿರುವ ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆ. ಘಟನೆ ಬೆನ್ನಲ್ಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಕೊರಿಯರ್ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಗೂಡ್ಸ್ ವಾಹನ ಬೇಲೂರಿನಿಂದ ಮೂಡಬಿದ್ರೆಗೆ ಹೋಗುತ್ತಿತ್ತು. ನಿದ್ರೆ ಮಂಪರಿನ ಕಾರಣಕ್ಕೆ, ಚಾಲಕ ಗಾಡಿ ಸೈಡ್ಗೆ ಹಾಕಿದ್ದರು. ಇದೇ ವೇಳೆ ಲಾರಿಯಲ್ಲಿದ್ದ ಡ್ರೈವರ್ ಸಹ ನಿದ್ರೆ ಮಂಪರ್ನಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇನ್ನೊಂದು ಘಟನೆಯಲ್ಲಿ ಹೊರನಾಡಿನಿಂದ ಮೂಡಿಗೆರೆಗೆ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ಬಗ್ಗೆ ವರದಿಯಾಗಿದೆ. ಜಿಂಕೆಯೊಂದು ಕಾರಿಗೆ ಅಡ್ಡಬಂದ ಪರಿಣಾಮ ಕಾರು ಪಲ್ಟಿಯಾಗಿದೆ. ಸಂಪಿಗೆಖಾನ್ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಅಡ್ಡ ಬಂದ ಜಿಂಕೆಯನ್ನು ತಪ್ಪಿಸಲು ಮುಂದಾದಾಗ, ಕಾರು ರಸ್ತೆಪಕ್ಕದ ಚರಂಡಿಗೆ ಉರುಳಿ, ಪಲ್ಟಿಯಾಗಿದೆ. ಇನ್ನೂ ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ.
ಇನ್ನಷ್ಟು ಸುದ್ದಿಗಳು
ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL
ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ
