ಪಾದಚಾರಿಗೆ ಡಿಕ್ಕಿ ಹೊಡೆದು ಕರೆಂಟ್ ಕಂಬಕ್ಕೆ ಗುದ್ದಿ ಬೈಕ್ ಸವಾರ! ಇಬ್ಬರ ದುರ್ಮರಣ!

ಶಿವಮೊಗ್ಗದ ಸುತ್ತುಕೋಟೆಯ (suttukote) ಬಳಿ ನಡೆದ ಘಟನೆ , The incident took place near Suttukote in Shimoga

ಪಾದಚಾರಿಗೆ ಡಿಕ್ಕಿ ಹೊಡೆದು ಕರೆಂಟ್ ಕಂಬಕ್ಕೆ ಗುದ್ದಿ ಬೈಕ್ ಸವಾರ! ಇಬ್ಬರ ದುರ್ಮರಣ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS

ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಸುತ್ತುಕೋಟೆಯ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯಲ್ಲಿ, ಬರುವ ಸುತ್ತುಕೋಟೆಯಲ್ಲಿ  ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ. 

ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ. ಇನ್ನೊಂದೆಡೆ ನಿಯಂತ್ರಣಕ್ಕೆ ಸಿಗದ ಬೈಕ್​ ಕರೆಂಟ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಮೇಘರಾಜ್​ಗೆ ಗಂಭೀರ ಗಾಯವಾಗಿ ಅಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೂ  ಪಾದಚಾರಿ ಹನುಮಂತಪ್ಪ ಆಸ್ಪತ್ರೆಗೆ ಸಾಗುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. 

 


ಇನ್ನಷ್ಟು ಸುದ್ದಿಗಳು 

ಆಸ್ಪತ್ರೆ Appointment ಗಾಗಿ 10 ರೂಪಾಯಿ Pay ಮಾಡಿದ ವ್ಯಕ್ತಿಗೆ ಕಾದಿತ್ತು ಶಾಕ್!

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ರೇಡ್​ | ಸಿಕ್ತು ಮಂಗಳೂರು ಸ್ಪೇಷಲ್​ 93 ಬೀಡಿ | ಕಾರ್ಬನ್​​ ಮೊಬೈಲ್!

ಮೈಸೂರು ದಸರಾಕ್ಕೆ ಹೋಗಬೇಕಿದ್ದ ನೇತ್ರಾಳ ಪ್ರೆಗ್ನೆನ್ಸಿ ರಿಪೋರ್ಟ್​ ನೆಗೆಟಿವ್ ಇತ್ತು! ಹಾಗಾದರೆ ವಿಸ್ಮಯ ನಡೆಯಿತೆ? JP ಬರೆಯುತ್ತಾರೆ!