indian army : ಭಾರತೀಯ ಸೇನೆಯ ಯಶಸ್ಸಿಗೆ ಮುಸ್ಲಿಂ ಸಮುದಾಯದಿಂದ ಪ್ರಾರ್ಥನೆ
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಬಾರತದ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂದು ದೇಶದಾದ್ಯಂತ ನಾಗರೀಕರು ದೇವರಿಗೆ ಪೂಜೆಯನ್ನು ಸಲ್ಲಿಸುತ್ತಿದ್ದಾರೆ. ಅದೇ ರೀತಿ ಇಂದು ಶಿವಮೊಗ್ಗ ನಗರದ ಎಲ್ಲಾ ಮಸೀದಿಗಳಲ್ಲಿ ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ ನಂತರ ಭಾರತ ದೇಶದ ಸೇನೆಯ ಯಶಸ್ಸಿಗೆ ಮತ್ತು ದೇಶದ ಭದ್ರತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಾವು ಯಾವ ದೇಶದಲ್ಲಿ ವಾಸಿಸುತ್ತೇವೆ ಆ ದೇಶದ ಪರ ಮತ್ತು ದೇಶದ ಒಳಿತಿಗಾಗಿ ಸದಾ ಕಾಲ ತಮ್ಮ ಜೀವನವನ್ನು ಮುಡಿಪಾಗಿ ಇಡುವ ಬಗ್ಗೆ ಕುರಾನ್ ನಲ್ಲಿ ವಿಶ್ಲೇಷಣೆ ಮಾಡಿರುವ ಶ್ಲೋಕ ಪಠಿಸಿ ಪ್ರಾರ್ಥನೆ ಸಲ್ಲಿಸಿದರು.