indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

This Article Written by / Prathapa thirthahalli / ಜೂನ್ 19, 2025

indian post office

indian post office : ತೀರ್ಥಹಳ್ಳಿ ಹಾಗೂ ಶಿವಮೊಗ್ಗ ವ್ಯಾಪ್ತಿಯ ಅಂಚೆ ಕಚೇರಿಗಳ ವಹಿವಾಟು ತಾತ್ಕಾಲಿಕ ಸ್ಥಗಿತ | ಕಾರಣವೇನು

ಭಾರತೀಯ ಅಂಚೆ ಇಲಾಖೆ ಆದೇಶದಂತೆ ಭದ್ರಾವತಿ ಮತ್ತು ಸಾಗರ ಪ್ರಧಾನ ಅಂಚೆ ಕಚೇರಿಗಳ ಮತ್ತು ಅದರ ವ್ಯಾಪ್ತಿಯ ಎಲ್ಲಾ ಉಪ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎ.ಪಿ.ಟಿ.2.0) ಅಳವಡಿಕೆ ಮಾಡಲು ಉದ್ದೇಶಿಸಿದೆ ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಪೂರ್ವಸಿದ್ಧತೆಗಾಗಿ ಜೂನ್​ 21 ರಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. 

indian post office :  ಹಾಗೆಯೇ ಜೂನ್. 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಡಿಯಲ್ಲಿ ಬರುವ ಅಂಚೆ ಕಚೇರಿಗಳಲ್ಲಿ ಎಲ್ಲಾ ರೀತಿಯ ವ್ಯವಹಾರ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದೆ. ಸಾರ್ವಜನಿಕರು ಸಹಕರಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment