indian railway news  ರೈಲು ದುರಂತ, 5 ಜನ ಪ್ರಯಾಣಿಕರ ಸಾವು

This Article Written by / Prathapa thirthahalli / ಜೂನ್ 9, 2025

indian railway news

indian railway news  ರೈಲು ದುರಂತ  5 ಜನ ಪ್ರಯಾಣಿಕರ ಸಾವು, ಹಲವರಿಗೆ ಗಾಯ

ಥಾಣೆ : ಕಿಕ್ಕಿರಿದು ತುಂಬಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.  ಈ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

indian railway news ಜಿಲ್ಲೆಯ ಮುಂಬ್ರಾ ಠಾಣೆ ಬಳಿ ಈ ದುರ್ಘಟನೆ ನಡೆದಿದ್ದು, ಸುದ್ದಿ ತಿಳಿದ ಕೂಡಲೇ ಥಾಣೆ ಜಿಆರ್‌ಪಿ (ಸರ್ಕಾರಿ ರೈಲ್ವೆ ಪೊಲೀಸ್) ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅರ್ಚನಾ ದುಸಾನೆ ಸ್ಥಳಕ್ಕೆ ದೌಡಾಯಿಸಿದರು. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣದಿಂದ ಕಾಸರ ಕಡೆಗೆ ಹೋಗುತ್ತಿದ್ದ ಜನರಿಂದ ತುಂಬಿ ತುಳುಕುತ್ತಿದ್ದ ಲೋಕಲ್ ರೈಲಿನಿಂದ ಕೆಳಗೆ ಬಿದ್ದು ಕೆಲ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಈ ದುರಂತಕ್ಕೆ ರೈಲಿನ ಅತಿಯಾದ ಜನದಟ್ಟಣೆಯೇ ಪ್ರಮುಖ ಕಾರಣ ಎಂದು ಅಂದಾಜಿಸಲಾಗಿದ್ದು,  ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Z

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮುಂದಿನ ಸುದ್ದಿ ಒದಿ

Leave a Comment