ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ : ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್
ಪೊಲೀಸ್ ಇಲಾಖೆಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿ.ಕೆ.ಮಿಥುನ್ಕುಮಾರ್ ತಿಳಿಸಿದರು.
ಶಿವಮೊಗ್ಗ: ಸಮಾಜದಲ್ಲಿ ಜವಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಹೇಳಿದರು. ಇಲ್ಲಿನ ಗೋಪಾಲ ಬಡಾವಣೆಯಲ್ಲಿರುವ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ ಗುರುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಾಮಕೃಷ್ಣ ವಿದ್ಯಾಶ್ರಮ ಟ್ರಸ್ಟ್, ಶಿವಮೊಗ್ಗ ಪ್ರೆಸ್ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಮಾದಕ ವಸ್ತು ವಿರೋಧಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನು ಸಹ ಓದಿ : ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ರವರಿಗೆ ಕಾಂಗ್ರೆಸ್ ಟಿಕೆಟ್ ಖಚಿತ
ಸಾಮಾಜಿಕ ಜವಾಬ್ದಾರಿ ಮರೆಯಾಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕಾದ ಜವಬ್ದಾಾರಿ ಶಿಕ್ಷಕರ ಮೇಲಿದೆ. ಶೈಕ್ಷಣಿಕ ಹಂತದಲ್ಲಿಯೇ ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಜೊತೆಗೆ ಶುದ್ಧ ಚಾರಿತ್ಯ ತುಂಬಿದಲ್ಲಿ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದರು.
ಇದನ್ನು ಸಹ ಓದಿ : ಇನ್ಮುಂದೆ ಕೃಷಿ ಭೂಮಿ ಪರಿವರ್ತನೆ ತುಂಬಾನೇ ಸರಳ/ ಹೇಗೆ ಗೊತ್ತಾ
ಮಕ್ಕಳು ಪ್ರೌಢ ಹಂತಕ್ಕೆ ತಲುಪಿದಾಗ ಬೇರೆ ವಸ್ತುಗಳ ಕಡೆ ಬಹಳ ಬೇಗ ಆಕರ್ಷಿತರಾಗುತ್ತಾರೆ. ಈ ಹಂತದಲ್ಲಿ ಯಾವುದು ಸರಿ, ಯಾವುದು ತಪ್ಪುು ಎಂಬುದನ್ನು ತಿಳಿದು ಸರಿದಾರಿಯಲ್ಲಿ ನಡೆದಾಗ ಮಾತ್ರ ಉತ್ತಮ ನಾಗರಿಕನಾಗಲು ಸಾಧ್ಯ. ಸಮಾಜದಲ್ಲಿ ಉತ್ತಮ ನಾಗರಿಕರ ಸಂಖ್ಯೆ ಹೆಚ್ಚಿದರೆ ಅಪರಾಧ ಕೃತ್ಯಗಳು ತಾನಾಗಿಯೇ ಕಡಿಮೆಯಾಗುತ್ತವೆ. ವಿದ್ಯಾರ್ಥಿ ದಿಸೆಯಲ್ಲೇ ಮಕ್ಕಳು ಜೀವನದಲ್ಲಿ ಸ್ಪಷ್ಟ ಗುರಿ ಉದೇಶ ಹೊಂದಿರುಬೇಕು. ಮಾದಕ ವಸ್ತುಗಳ ವಿರುದ್ಧ ಸ್ವಯಂ ನಿಯಂತ್ರಣ ಮಾಡಿಕೊಂಡಲ್ಲಿ ಇದಕ್ಕೆ ಬಲಿಯಾಗಲು ಸಾಧ್ಯವಿಲ್ಲ. ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡು ಸಮಾಜಕ್ಕೆ ಉತ್ತಮ ಕೊಡಗೆ ನೀಡಬೇಕು ಎಂದು ಕರೆ ನೀಡಿದರು.
ಇದನ್ನು ಸಹ ಓದಿ : ಶರಾವತಿ ಸಂತ್ರಸ್ತರ ಪರ ಸಂಸತ್ನಲ್ಲಿ, ಮೋದಿ ಸರ್ಕಾರಕ್ಕೆ ಸಂಸದ B.Y. ರಾಘವೇಂದ್ರರವರು ಸಲ್ಲಿಸದ ಮನವಿಯಲ್ಲಿ ಏನಿದೆ? ವಿವರ ಓದಿ
ಪತ್ರಕರ್ತರ ಕಾರ್ಯ ಅರ್ಥಪೂರ್ಣ:
ನಾನು ಹಲವಾರು ಜಿಲ್ಲೆಗಳಲ್ಲಿ ಪತ್ರಕರ್ತರ ಸಂಘಗಳ ಚಟುವಟಿಕೆಗಳನ್ನು ಹತ್ತಿರದಿಂದ ಗಮನಿಸಿದ್ದೇನೆ. ಆದರೆ, ಶಿವಮೊಗ್ಗ ಜಿಲ್ಲಾಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಚಟುವಟಿಕೆ ಬಹಳ ವಿಭಿನ್ನವಾಗಿದೆ. ಪತ್ರಕರ್ತ ವೃತ್ತಿ ಜೊತೆಗೆ ಸಮಾಜ ಮುಖಿಕಾರ್ಯದಲ್ಲಿ ಸಂಘ ಭಾಗಿಯಾಗುತ್ತಿರುವುದು ನಿಜಕ್ಕೂ ಅರ್ಥಪೂರ್ಣ. ನಿಮ್ಮ ಸುತ್ತಮುತ್ತ ಪ್ರದೇಶದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯತ್ತಿದ್ದರೆ ಅಂತಹ ಘಟನೆಗಳನ್ನು ಪೋಲೀಸರ ಗಮನಕ್ಕೆ ತಂದರೆ ಸಮಾಜಘಾತಕ ಕೃತ್ಯಗಳನ್ನು ತಡೆಯಬಹುದು. ಪೊಲೀಸ್ ಇಲಾಖೆಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಜಿ.ಕೆ.ಮಿಥುನ್ಕುಮಾರ್ ತಿಳಿಸಿದರು.
ಇದನ್ನು ಸಹ ಓದಿ : ಹೊಸನಗರ ರಸ್ತೆಯಲ್ಲಿ ಟ್ಯಾಂಕರ್ ಲಾರಿ ಪಲ್ಟಿ/ ಆತಂಕ ಮೂಡಿಸಿದ ಹೊಗೆ/ ಅಗ್ನಿಶಾಮಕ ಸಿಬ್ಬಂದಿ ದೌಡು
ಪ್ರೆಸ್ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್ ಮಾತನಾಡಿ, ಮಕ್ಕಳನ್ನು ಗಾಂಜಾದಂತ ಮಾದಕ ವಸ್ತುಗಳಿಂದ ದೂರ ಇರಿಸುವ ಜೊತೆಗೆ ಇತ್ತೀಚೆಗೆ ಮಾದಕ ವಸ್ತುವಿನಂತಾಗಿರುವ ಮೊಬೈಲ್ನಿಂದಲೂ ಮಕ್ಕಳನ್ನು ದೂರ ಇಡಬೇಕಾದರ ಸನ್ನಿವೇಶ ನಿರ್ಮಾಣವಾಗಿದೆ ಎಂದರು. ಕಾರ್ಯಕ್ರಮದಲ್ಲಿ ರಾಮಕೃಷ್ಣ ವಿದ್ಯಾನಿಕೇತನ ಕಾರ್ಯದರ್ಶಿ ಶೋಭಾ ವೆಂಕಟರಮಣ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಣ ಎಸ್.ಸಿ.ತೀರ್ಥೇಶ್ ಸ್ವಾಗತಿಸಿದರು, ವಿದ್ಯಾಾರ್ಥಿನಿ ವರ್ಷಿಣಿ ತಂಡ ಶ್ಲೋಕ ಹಾಡಿದರು, ಅನ್ಯನ್ಯ ಮತ್ತು ವಿಧಾತ್ರಿ ಪ್ರಾರ್ಥಿಸಿದರು, ಶಿಕ್ಷಕ ಕೆ.ಎಂ.ನಾಗರಾಜ್ ವಂದಿಸಿದರು.
ಗಾಂಜಾ ಮಾರಾಟಗಾರರಿಗೆ ಮಕ್ಕಳೇ ಗಿರಾಕಿಗಳಾಗಬಹುದು ಎಚ್ಚರ
ನಮ್ಮಲ್ಲಿ ಪ್ರಾಮಾಣಿಕತೆ, ಬದ್ಧತೆ ಇದ್ದರೆ ಅದು ಆತನ ಯಶಸ್ಸಿಗೆ ದಾರಿ ತೋರಿಸುತ್ತದೆ. ಚಿಕ್ಕವರಿದ್ದಾಗ ದೊಡ್ಡ ಕನಸು ಕಾಣಿ, ಆ ಕನಸು ಮಾಡಲು ಶ್ರದ್ಧೆೆಯಿಂದ, ಆತ್ಮವಿಶ್ವಾಾಸದಿಂದ ಮುನ್ನೆಡಯರಿ ಆಗ ಗುರಿ ತಲುಪಲು ಸಾಧ್ಯ, ಅದೇ ಒಂದು ಸಣ್ಣ ಚಟ ನಮ್ಮ ಭವಿಷ್ಯವನ್ನೇ ಹಾಳು ಮಾಡುತ್ತದೆ. ಇಂದಿನ ಮಕ್ಕಳು ನಾಳೆ ಗಾಂಜಾ ಮಾರಾಟಗಾರರಿಗೆ ಗಿರಾಕಿಗಳಾಗಬಹುದು. ಆದರಿಂದ ಮಕ್ಕಳು ಎಚ್ಚರಿಕೆಯಿಂದ ಹೆಜ್ಜೆೆಇಡಬೇಕು ಎಂದು ಶಿವಮೊಗ್ಗ ಜಿಲ್ಲಾಾ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಸಲಹೆ ನೀಡಿದರು.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link
ಮಲೆನಾಡ ಹೆಬ್ಬಾಗಿಲು ಎಂದು ಖ್ಯಾಾತವಾಗಿರುವ ಶಿವಮೊಗ್ಗ ಜಿಲ್ಲೆಗೆ ಇಂದು ಗಾಂಜಾ ಎಂಬ ಕಳಂಕ ಅಂಟಿಕೊಳ್ಳುತ್ತಿದೆ. ಜಿಲ್ಲೆಗೆ ಅಂಟಿರುವ ಕಳಂಕವನ್ನು ತೊಳೆಯುವ ಉದ್ದೇಶದಿಂದ ನಮ್ಮ ನಡೆ ಸಮಾಜದ ಕಡೆ ಎಂಬ ಘೋಷವಾಕ್ಯದೊಂದಿಗೆ ಮಾದಕ ವಸ್ತು ವಿರೋಧಿ ಅಭಿಯಾನವನ್ನು ಶಿವಮೊಗ್ಗ ಜಿಲ್ಲಾ ಕಾರ್ಯಕರ್ತರ ಸಂಘವು ನಿರಂತವಾಗಿ ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ನಮ್ಮ ಸೋಶಿಯಲ್ ಮೀಡಿಯಾ : ಟ್ವಿಟ್ಟರ್ : ಫೇಸ್ಬಕ್ : ಇನ್ಸ್ಟಾಗ್ರಾಮ್ : ಟೆಲಿಗ್ರಾಂ : ವಾಟ್ಸ್ಯಾಪ್