ಬಿ.ವೈ ವಿಜಯೇಂದ್ರರನ್ನ ಸೋಲಿಸುವ ಉದ್ದೇಶಕ್ಕೆ ಬಿಎಸ್​ವೈ ತೋಟದ ಬಳಿ ವಾಮಚಾರ ನಡೆಸಿದ್ರಾ ದುಷ್ಕರ್ಮಿಗಳು?

Inhuman Evil Practices near BSY Garden with the intention of defeating B.Y. Vijayendra in the election

ಬಿ.ವೈ ವಿಜಯೇಂದ್ರರನ್ನ ಸೋಲಿಸುವ ಉದ್ದೇಶಕ್ಕೆ ಬಿಎಸ್​ವೈ ತೋಟದ ಬಳಿ ವಾಮಚಾರ ನಡೆಸಿದ್ರಾ ದುಷ್ಕರ್ಮಿಗಳು?

KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS 

ಶಿಕಾರಿಪುರ/ ಶಿವಮೊಗ್ಗ/ ಶಿಕಾರಿಪುರ ತಾಲೂಕು ಬಂಡಿಬೈರನಹಳ್ಳಿ, ಮಜಿರೆ ಸಿದ್ಧನಪುರ ಗ್ರಾಮದ ಸರ್ವೆ ನಂ 36 ರಲ್ಲಿರುವ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ರವರಿಗೆ ಸೇರಿದ ಅಡಿಕೆ ತೋಟದ ಕಾಪೌಂಡ್ ಬಳಿ ವಾಮಚಾರ ನಡೆದಿತ್ತಾ?  ಬಿ ವೈ ವಿಜಯೇಂದ್ರ  ರವರು ಚುನಾವಣೆಯಲ್ಲಿ ಸೋಲಿಸುವ ನಿಟ್ಟಿನಲ್ಲಿ ಇಂತಹದ್ದೊಂದು ಕೃತ್ಯವನ್ನ ಎಸೆಗಲಾಗಿದೆ ಎಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್ ಸ್ಟೇಷನ್ ನಲ್ಲಿ ಕಂಪ್ಲೆಂಟ್ ಆಗಿದೆ. ಈ ಸಂಬಂಧ Act & Section: IPC 1860 (U/s-426,447); Karnataka Prevention and Eradication of Inhuman Evil Practices and Black Magic Act, 2017 (U/s-3(2)) ಅಡಿಯಲ್ಲಿ ಕೇಸ್​ ಕೂಡ ದಾಖಲಾಗಿದೆ. 

ಏನಿದೆ ದೂರಿನಲ್ಲಿ?

ಯಡಿಯೂರಪ್ಪನವರ ತೋಟದಲ್ಲಿ ನಡೆದ ಕೃತ್ಯದ ಸಂಬಂಧ ತೋಟದ ಸಿಬ್ಬಂದಿ ದೂರು ನೀಡಿದ್ದಾರೆ. ದೂರಿನ ಪ್ರಕಾರ, ದಿನಾಂಕ: 11-05-2023 ರಂದು ರಾತ್ರಿ 10-00 ಗಂಟೆಯಿಂದ 10-30 ಗಂಟೆ ನಡುವಿನ ಸಮಯದಲ್ಲಿ 3-4 ಜನರು ದುಷ್ಕರ್ಮಿಗಳು ಕಾಡು ಪ್ರಾಣಿಯೊಂದನ್ನ ಕೊಂದು, ತೋಟದಲ್ಲಿ ಹೂತು ಹಾಕಿದ್ದಾರೆ.  ವಿಜಯೇಂದ್ರ ರವರಿಗೆ ಕೇಡನ್ನು ಉಂಟು ಮಾಡುವ ಸಲುವಾಗಿ ತೋಟದ ಕಾಂಪೌಂಡ್​ ಬಳಿ ವಾಮಚಾರ ಮಾಡಿ, ಕೊಂದ ಪ್ರಾಣಿಯನ್ನು ಹೂತು ಹಾಕಲಾಗಿದೆ. ಇದರ  ಹಿಂದಿನ ಉದ್ದೇಶ ಹಾಗೂ ದುಷ್ಕರ್ಮಿಗಳನ್ನು ಹಿಡಿಯಬೇಕು ಎಂದು ದೂರು ನೀಡಲಾಗಿದೆ. 

FINAL ಫಲಿತಾಂಶ/ ಶಿವಮೊಗ್ಗ ಜಿಲ್ಲೆಯಲ್ಲಿ ಗೆದ್ದವರು ಯಾರು? ಸೋತವರು ಯಾರು?  ಅಂತಿಮ ರಿಸಲ್ಟ್​ನಲ್ಲಿ ಇರುವ ಕುತೂಹಲ ಅಂಶಗಳೇನು ತಿಳಿಯಿರಿ 

Malenadutoday.com Social media