ಶಿವಮೊಗ್ಗ ಸೇರಿದಂತೆ ರಾಜ್ಯದ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ | ಸಚಿವರು ಹೇಳಿದ್ದೇನು?

Urban Development Minister BS Suresha Byrathi, investigation into Smart Cities,Prime Minister Narendra Modi, 

ಶಿವಮೊಗ್ಗ ಸೇರಿದಂತೆ ರಾಜ್ಯದ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ತನಿಖೆ | ಸಚಿವರು ಹೇಳಿದ್ದೇನು?
Urban Development Minister BS Suresha Byrathi, investigation into Smart Cities,Prime Minister Narendra Modi, 

SHIVAMOGGA | MALENADUTODAY NEWS | ಮಲೆನಾಡು ಟುಡೆ  Jan 3, 2025 ‌‌ 

ಶಿವಮೊಗ್ಗ ಸ್ಮಾರ್ಟ್‌ ಸಿಟಿ ಕಾಮಗಾರಿ ಬಗ್ಗೆ ಸಾಕಷ್ಟು ಅನುಮಾನಗಳು ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿದೆ. ಅದರಲ್ಲಿಯು ಸ್ಮಾರ್ಟ್‌ಸಿಟಿಯ ಅವಾಂತರಗಳಂತೂ ಹೇಳ ತೀರದಂತಾಗಿದೆ. ಈ ನಡುವೆ  ಸ್ಮಾರ್ಟ್‌ ಸಿಟಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬೆಳಗಾವಿ, ದಾವಣಗೆರೆ,  ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಸ್ಮಾರ್ಟ್‌ ಸಿಟಿ ಕಾಮಗಾರಿಗಳ ಗುಣಮಟ್ಟವೇ ಸರಿಯಾಗಿಲ್ಲ ಎಂದು ಆಕ್ರೋಶ ಹೊರಹಾಕಿದ ಅವರು ಈ ಸಂಬಂಧ ತನಿಖೆಗಾಗಿ ಸಮಿತಿ ರಚನೆ ಮಾಡಿ ಎಂದು ಸೂಚನೆ ನೀಡಿದರು. 

SUMMARY |  Urban Development Minister BS Suresha Byrathi, investigation into Smart Cities,Prime Minister Narendra Modi, 

KEY WORDS | Urban Development Minister BS Suresha Byrathi, investigation into Smart Cities,Prime Minister Narendra Modi