ಫೆಬ್ರವರಿ 20 ರಿಂದ 25ವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನಯಾತ್ರೆ
JD(S) Pancharatna Yatra in Shivamogga district from February 20 to 25
MALENADUTODAY.COM | SHIVAMOGGA NEWS
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಇದೇ ಫೆಬ್ರವರಿ 20 ಕ್ಕೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂಇಬ್ರಾಹಿಂ, ಮುಖಂಡ ಎಸ್.ಎಲ್.ಬೋಜೇಗೌಡ, ನಿಖಿಲ್ ಕುಮಾರಸ್ವಾಮಿ, ಶಾರದಾ ಪೂರ್ಯ ನಾಯ್ಕ, ಎಂ.ಶ್ರೀಕಾಂತ್ ಸೇರಿದಂತೆ ಅನೇಕ ಮುಖಂಡರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇನ್ನೂ ಯಾತ್ರೆಯ ವಿವರವನ್ನು ನೋಡುವುದಾದರೆ,
- ಫೆ. 21 ರಂದು ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಜೆ 5 ಗಂಟೆಗೆ ಭದ್ರಾವತಿಯ ಕನಕ ಮಂಟಪದಲ್ಲಿ ಬಹಿರಂಗ ಸಭೆ
- ನವುಲೆ ಬಸವಾಪುರ ಗ್ರಾಮದಲ್ಲಿ (ಕೆ.ಎಂ.ಎಸ್ ಡೈರಿ ಹಿಂಬಾಗ) ಗ್ರಾಮವಾಸ್ತವ್ಯ.
- ಫೆ. 22 ರಂದು ಸಂಜೆ 7 ಗಂಟೆಗೆ ಹಾರನಹಳ್ಳಿಯಲ್ಲಿ ಬಹಿರಂಗ ಸಭೆ, ಸಭೆಯ ನಂತರ ಶಿವಮೊಗ್ಗ ನಗರದ ಮಲವಗೊಪ್ಪದ ಚನ್ನಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಗ್ರಾಮ ವಾಸ್ತವ್ಯ.
- ಫೆ. 23ರಂದು ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರದ ವಿವಿಧ ಗ್ರಾಮಗಳಲ್ಲಿ ಸಂಚರಿಸಿ, ಸಂಜೆ 4 ಗಂಟೆಗೆ ಸೊರಬ ವಿಧಾನಸಭಾ ಕ್ಷೇತ್ರವನ್ನು ಪಂಚರತ್ನ ಯಾತ್ರೆ ತಲುಪಲಿದೆ. ಸೊರಬ ವಿಧಾನಸಭಾ ಕ್ಷೇತ್ರದೆ ಬಹಿರಂಗ ಸಭೆ ಹಾಗೂ ಗ್ರಾಮ ವಾಸ್ತವ್ಯ.
- ಫೆ. 24 ರಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ನಂತರ ದಿನಾಂಕ ಹುಂಚದಕಟ್ಟೆಯಲ್ಲಿ ಗ್ರಾಮವಾಸ್ತವ್ಯ.
- ಫೆ.25 ರ ಬೆಳಿಗ್ಗೆ 12 ಗಂಟೆಗೆ ತೀರ್ಥಹಳ್ಳಿಯ ಟಿ.ಎ.ಪಿ.ಸಿ.ಎಂ.ಎಸ್ ಆವರಣದಲ್ಲಿ ಬಹಿರಂಗ ಸಭೆ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com