k s eshwarappa : ಕಾಂಗ್ರೆಸ್ ಸರ್ಕಾರ ಧರ್ಮಕ್ಕೆ ಹಾಗೂ ಸಂವಿಧಾನಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಇಂದು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ತನ್ನ ಮನಸ್ಥಿತಿಯನ್ನು ಬಲಿಸಿಕೊಳ್ಳಬೇಕು ಇಲ್ಲದಿದ್ದರೆ ಅವರನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ 43 ಪ್ರಕರಣಗಳನ್ನು ವಾಪಸ್ ಪಡೆದಿತ್ತು. ಆದರೆ ಹೈಕೋರ್ಟ್ ಆ ಆದೇಶವನ್ನು ರದ್ದುಗೊಳಿಸಿದೆ. ಒಂದು ಸರ್ಕಾರಕ್ಕೆ ಸಂವಿಧಾನ ಹಾಗೂ ಕಾನೂನು ಬಾಹಿರ ಎಂದು ಕೋರ್ಟ್ ಛೀಮಾರಿ ಹಾಕಿದ್ದು ಇದೇ ಮೊದಲು ಎಂದರು.
ಮಂಗಳೂರಿನಲ್ಲಿ ನಡೆದ ಕೊಲೆ ಬಗ್ಗೆ ಕಾಂಗ್ರೆಸ್ ನಾಯಕರು ಸ್ಫರ್ಧಾರ್ತ್ಮಕವಾಗಿ ಹೇಳಿಕೆಯನ್ನು ನೀಡುತ್ತಿದ್ದಾರೆ.ಸುಹಾಸ್ ಶೆಟ್ಟಿ ಕೊಲೆಯಾದಾಗ ನಾವು ರೌಡಿ ಶೀಟರ್ ಮನೆಗೆ ಭೇಟಿ ನೀಡಬೇಕೆ ಎಂದು ಕೇಳಿದ್ದರು. ಆದರೆ ಈಗ ಮಂಗಳೂರಿನಲ್ಲಿ ಶಾಂತಿ ನೆಲೆಸುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು.

k s eshwarappa : ಮಂಗಳೂರು ಕೊಲೆ ಹಿನ್ನೆಲೆ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ರಾಜಿನಾಮೆ ನೀಡುವಂತೆ ಮುಸಲ್ಮಾನರು ಆಗ್ರಹಿಸಿದ್ದಾರೆ.ಹಾಗಾಗಿ ಈಗ ಕಾಂಗ್ರೆಸ್ ನಾಯಕರು ಮುಸಲ್ಮಾನರ ಹೆದರಿಕೆಯಿಂದ ರಾಜ್ಯದ ಜನರು ಶಾಂತಿ ಕಾಪಾಡಬೇಕೆಂದು ಹೇಳುತ್ತಿದ್ದಾರೆ.ಈ ಕಾಂಗ್ರೆಸ್ ಸರ್ಕಾರಕ್ಕೆ ಧರ್ಮ ದೇಶ ಯಾವುದೂ ಬೇಡ. ಮಂಗಳೂರು ಎಸ್.ಪಿ., ಕಮಿಷನರ್ ಯಾವ ಪುರುಷಾರ್ಥಕ್ಕೆ ಟ್ರಾನ್ಸ್ವರ್ ಮಾಡಿದ್ದಾರೆ ಎಂದು ಗೊತ್ತಿಲ್ಲ. ಮೊದಲು ಇಂತಹ ಕೃತ್ಯಗಳನ್ನು ನಡೆಸುತ್ತಿರುವ ಮುಸಲ್ಮಾನ್ ವ್ಯಕ್ತಿಗಳನ್ನು ಎತ್ತಂಗಡಿ ಮಾಡಿ ಎಂದರು.
k s eshwarappa : ನಕ್ಸಲ್ ನಿಗ್ರಹ ಪಡೆಗಳಿಗೆ ಸಂಬಳ ನಿಮ್ಮನೆಯಿಂದ ತಂದು ಕೊಡ್ತೀರಾ
ಸೂಕ್ಷ್ಮ ಪ್ರದೇಶಗಳಾಗಿರುವ ಮಂಗಳೂರು, ಉಡುಪಿ, ಶಿವಮೊಗ್ಗಕ್ಕೆ ವಿಶೇಷ ಪೊಲೀಸ್ ಪಡೆ ರಚಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಪೊಲೀಸ್ ಪಡೆಗೆ ಉನ್ನತ ಅಧಿಕಾರಿಗಳು, ನಕ್ಸಲ್ ನಿಗ್ರಹ ಪಡೆ ಅಧಿಕಾರಿಗಳನ್ನು ನೇಮಿಸುವುದಾಗಿ ಹೇಳಿದ್ದಾರೆ. ಅವರಿಗೆ ಸಂಬಳ ನಿಮ್ಮನೆಯಿಂದ ತಂದು ಕೊಡ್ತಿರಾ ಎಂದು ಪ್ರಶ್ನಿಸಿದ ಈಶ್ವರಪ್ಪ, ಕಾಂಗ್ರೆಸ್ ಗಲಭೆ ಸೃಷ್ಟಿಸುವ ಕೇಂದ್ರವಾಗಿದೆ. ಎಂದು ಆಕ್ರೋಶ ವ್ಯಕ್ತಪಡಿಸಿದರು. ಓಟ್ ಬ್ಯಾಂಕ್ ಗಾಗಿ ಹಿಂದು-ಮುಸಲ್ಮಾನರನ್ನು ಎತ್ತಿ ಕಟ್ಟುತ್ತಿದ್ದು ಕೇವಲ ಓಟಿಗಾಗಿ ರಾಜಕೀಯ ಮಾಡಿ ಗಲಭೆ ಸೃಷ್ಟಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಈ ಸರ್ಕಾರ ಯಾವಾಗ ಪತನವಾಗುತ್ತೋ ಗೊತ್ತಿಲ್ಲ ಎಂದು ಅಭಿಪ್ರಾಯ ಪಟ್ಟರು.