ಶಿವಮೊಗ್ಗ : ಹಂದಿ ಅಣ್ಣಿಯ ಹತ್ಯೆಯ (handi anni murder) ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಶಿವಮೊಗ್ಗ ಕೋರ್ಟ್ ಆರು ತಿಂಗಳ ಶಿಕ್ಷೆ ವಿಧಿಸಿದೆ. ಕೋರ್ಟ್ಗೆ ಹಾಜರಾಗದೇ ತಪ್ಪಿಸಿ ತಿರುಗುತ್ತಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಈ ಶಿಕ್ಷೆ ವಿಧಿಸಲಾಗಿದೆ.
29 ವರ್ಷದ ಕಾರ್ತಿಕ @ ಕಾಡ,(kada karti) ವಿನೋಬನಗರ ಠಾಣೆಯ ಒಟ್ಟು 4 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಆದರೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ, ಈತನ ವಿರುಧ್ಧ ಕೋರ್ಟ್ ದಸ್ತಗಿರಿ ವಾರೆಂಟ್ & ಪ್ರೋಕ್ಲಮೇಷನ್ ಹೊರಡಿಸಿತ್ತು.
ಈ ಸಂಬಂಧ 229(ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ 3ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಧೀಶರಾದ ಶೃತಿ ರವರುವಿಚಾರಣೆ ನಡೆಸಿ ತೀರ್ಪು ನೀಡಿದ್ಧಾರೆ. ನಿನ್ನೆ ಅಂದರೆ, ದಿನಾಂಕಃ-05-12-2022 ರಂದು ಹೊರಬಿದ್ದ ತೀರ್ಪಿನಲ್ಲಿ ಕಾಡಾ ಕಾರ್ತಿಗೆ 6 ತಿಂಗಳು ಸಾದಾ ಕಾರಾವಾಸ ಶಿಕ್ಷೆ & ರೂ 2,000/- ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಲಾಗಿದೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link
