ಅರಕೆರೆ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ಹಂಚಿಕೊಳ್ಳಿ
WhatsApp Facebook X Telegram
Karisiddeshwara Swamiji
Karisiddeshwara Swamiji

Karisiddeshwara Swamiji 

ಭದ್ರಾವತಿ: ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿರುವ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಪೀಠಾಧಿಪತಿಗಳಾದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ (69) ಅವರು ಭಾನುವಾರ ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿಗಳ ನಿಧನದಿಂದ ಭಕ್ತ ಸಮೂಹದಲ್ಲಿ ತೀವ್ರ ಶೋಕ ಆವರಿಸಿದೆ.

ಅವರಿಗೆ ಪತ್ನಿ ಮತ್ತು ಒಬ್ಬ ಪುತ್ರ ಇದ್ದಾರೆ. ಶ್ರೀಗಳ ಅಂತ್ಯಕ್ರಿಯೆಯು ಸೋಮವಾರ ಮಠದ ಆವರಣದಲ್ಲಿ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ.

ಕರಿಸಿದ್ದೇಶ್ವರ ಸ್ವಾಮೀಜಿ ಅವರು ಹಿಂದೂ ಧರ್ಮ ಮತ್ತು ಸಂಸ್ಕಾರಗಳ ಬಗ್ಗೆ ಅಪಾರ ಜ್ಞಾನವನ್ನು ಹೊಂದಿದ್ದರು. ಹಲವು ಧಾರ್ಮಿಕ ಸಭೆ-ಸಮಾರಂಭಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಧರ್ಮದ ಬಗ್ಗೆ ಜಾಗೃತಿ ಮೂಡಿಸಿದ್ದರು.ವಿಶೇಷವಾಗಿ, ಕೋವಿಡ್-19 ಮಹಾಮಾರಿಯ ಸಮಯದಲ್ಲಿ, ಸ್ವಾಮೀಜಿಗಳು ಸ್ವತಃ ಮಾಸ್ಕ್‌ಗಳನ್ನು ತಯಾರಿಸಿ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಿ ತಮ್ಮ ಸಾಮಾಜಿಕ ಕಳಕಳಿಯನ್ನು ವ್ಯಕ್ತಪಡಿಸಿದ್ದರು. ಇವರು ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ವಂಶಪಾರಂಪರೆಯ ಗುರುಗಳಾಗಿದ್ದು, ತಮ್ಮ ತಂದೆಯವರ ನಿಧನದ ನಂತರ ಮಠದ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Karisiddeshwara Swamiji
Karisiddeshwara Swamiji

 

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor