ಶಿವಮೊಗ್ಗ ಏರ್​ಪೋರ್ಟ್ ವಿಚಾರ ಸಂಬಂಧ ಬಿಎಸ್​ವೈ ಜೊತೆಗೆ ಮಾತನಾಡಲು ಮುಂದಾದ ಸಿಎಂ ಬಸವರಾಜ ಬೊಮ್ಮಾಯಿ !ಕಾರಣ?

Karnataka CM Basavaraj Bommai to speak to BSY on Shimoga airport issue

ಶಿವಮೊಗ್ಗ ಏರ್​ಪೋರ್ಟ್ ವಿಚಾರ ಸಂಬಂಧ ಬಿಎಸ್​ವೈ ಜೊತೆಗೆ ಮಾತನಾಡಲು ಮುಂದಾದ ಸಿಎಂ ಬಸವರಾಜ ಬೊಮ್ಮಾಯಿ !ಕಾರಣ?
ಶಿವಮೊಗ್ಗ ಏರ್​ಪೋರ್ಟ್ ವಿಚಾರ ಸಂಬಂಧ ಬಿಎಸ್​ವೈ ಜೊತೆಗೆ ಮಾತನಾಡಲು ಮುಂದಾದ ಸಿಎಂ ಬಸವರಾಜ ಬೊಮ್ಮಾಯಿ !ಕಾರಣ?

MALENADUOTDAY.COM | SHIVAMOGGA AIRPORT NEWS

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (SHIVAMOGGA AIRPORT) ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಹೆಸರನ್ನೆ ಇಡಬೇಕು . ಈ ಸಂಬಂದ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆಯನ್ನು ಕಳಿಸುತ್ತೇವೆ ಎಂದು ಶಿವಮೊಗ್ಗದಲ್ಲಿಯೇ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದ್ದರು. 

ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ

ಆದರೆ ಈ ಹಿಂದೆಯೇ ಕೇಳಿಬಂದಿದ್ದ ಪ್ರಸ್ತಾವನೆಯನ್ನು ವಿರೋಧಿಸಿದ್ದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಈ ಸಲವು ಸಿಎಂರವರ ಪ್ರಸ್ತಾಪವನ್ನು ನಿರಾಕರಿಸಿದ್ದರು. ಅಲ್ಲದೆ ಪತ್ರ ಬರೆದು ವಿಮಾನ ನಿಲ್ದಾಣಕ್ಕೆ ಮಹನೀಯರ ಹೆಸರನ್ನು ಇಡಿ ನನ್ನದು ಅಳಿಲು ಸೇವೆಯಷ್ಟೆ ಎಂದಿದ್ದಾರೆ. 

JP BIG EXCLUSIVE : ಸಕ್ರೆಬೈಲ್ ಅನೆ ಬಿಡಾರದಿಂದ ಮತ್ತೆ ಮೂರು ಆನೆಗಳ ಸ್ಥಳಾಂತರಕ್ಕೆ ಬೇಡಿಕೆ!

ಸದ್ಯ ಇದೇ ವಿಚಾರಕ್ಕೆ ಸಂಬಂಧಿಸಿದಂತೆ, ಸಿಎಂ ಬಸವರಾಜ ಬೊಮ್ಮಾಯಿ ಬಿಎಸ್​ವೈ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,  ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎ೦ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಿಂದಿನಿಂದಲೂ ಹೇಳುತ್ತಿದ್ದಾರೆ. ಆದರೆ, ಶಿವಮೊಗ್ಗದ ಜನ ಒತ್ತಡ ತಂದಿದ್ದಾರೆ. ಈ ಕುರಿತು ಅವರ ಜತೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ನಂದಿನಿ ಜಂಬೋ ಪಾಕೆಟ್ ಹಾಲಿನ ದರ 3 ರೂಪಾಯಿ ಹೆಚ್ಚಳ!

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com