ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಸದ್ಯ ಎಲ್ಲೆಡೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಈ ಮಧ್ಯೆ ಕೆಲವೊಂದು ಗಮನಾರ್ಹ ಘಟನೆಗಳು ಸಹ ನಡೆಯುತ್ತಿವೆ. ಪರೀಕ್ಷೆ ಬಿಟ್ಟು ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಸ್ವತಃ ಬಿಇಒ ಕರೆದುಕೊಂಡು ಬಂದು ಪರೀಕ್ಷೆ ಬರೆಸಿದ ಉದಾಹರಣೆ ಕೇಳಿಬಂದ ಬೆನಲ್ಲೆ ಶಿವಮೊಗ್ಗದಲ್ಲೊಂದು ಭಾವುಕ ಘಟನೆಯೊಂದು ನಡೆದಿದೆ. ಇಲ್ಲಿನ ವಿದ್ಯಾರ್ಥಿಯೊಬ್ಬಳು ತನ್ನ ತಂದೆಯ ಸಾವಿನ ನೋವಿನ ನಡುವೆ ಪರೀಕ್ಷೆ ಬರೆದಿದ್ದಾಳೆ.

ಸಾರ್ವಜನಿಕರಿಗೆ ಮಹತ್ವದ ಎಚ್ಚರಿಕೆ ನೀಡಿದ ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಏನದು
ತಂದೆಯ ಅಗಲಿಕೆಯ ತೀವ್ರ ದುಃಖದ ನಡುವೆಯೂ ವಿದ್ಯಾರ್ಥಿನಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದಾಳೆ ತಾಲ್ಲೂಕಿನ ಹಸೂಡಿ ಫಾರಂ ಈ ಘಟನೆಗೆ ಸಾಕ್ಷಿಯಾಗಿದೆ. ಇಲ್ಲಿನ ನಿವಾಸಿ ತಂಗರಾಜ್ ನಿನ್ನೆ ಬುಧವಾರ ಸಾವನ್ನಪ್ಪಿದ್ದರು. ಅವರ ಸಾವಿನ ಆಘಾತದ ನಡುವೆ ಪುತ್ರಿ ಶರಣ್ಯ ತಮ್ಮ ಇಂಗ್ಲಿಷ್ ಪರೀಕ್ಷೆಯನ್ನು ಎದುರಿಸಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ತೆರಳಬೇಕೋ ಅಥವಾ ಬೇಡವೋ ಎಂಣಬ ಗೊಂದಲದಲ್ಲಿದ್ದ ವಿದ್ಯಾರ್ಥಿನಿಯ ಮನಸ್ಥಿತಿಯನ್ನು ಅರಿತ ಶೆಟ್ಟಿಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರು ಹಾಗೂ ಸ್ಥಳೀಯ ಗ್ರಾಮಸ್ಥರು ಆಕೆಗೆ ಸಾಂತ್ವನ ಹೇಳಿ, ಪರೀಕ್ಷೆ ಬರೆಯುವಂತೆ ಧೈರ್ಯ ತುಂಬಿದರು.ಹೀಗಾಗಿ ವಿದ್ಯಾರ್ಥಿನಿ ಪರೀಕ್ಷೆ ಬರೆದು ವಾಪಸ್ ಆಗಿದ್ದಾಳೆ, ತದನಂತರ ಸಂಜೆ ನಡೆದ ತಮ್ಮ ತಂದೆಯ ಅಂತ್ಯಕ್ರಿಯೆ ಕಾರ್ಯಗಳಲ್ಲಿ ಬಾಗಿಯಾಗಿದ್ದಾಳೆ
21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
