SHIVAMOGGA NEWS TODAY

ಕೆ ಹೆಚ್ ಮುನಿಯಪ್ಪರಿಗೆ ಡಿ,ಸಿ,ಎಂ ಸ್ಥಾನ ನೀಡಿ ಇಲ್ಲದಿದ್ದರೆ ಪಶ್ಚಾತಾಪ ಪಡಬೇಕಾಗುತ್ತದೆ : ಎಂ ಗುರುಮೂರ್ತಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಆಹಾರ ಸಚಿವ ಹಾಗೂ ಮಾದಿಗ ಸಮುದಾಯದ ಹಿರಿಯ ನಾಯಕರಾದ ಕೆ ಹೆಚ್ ಮುನಿಯಪ್ಪ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಡಿ. ಎಸ್. ಗುರುಮೂರ್ತಿ ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 50 ಲಕ್ಷಕ್ಕೂ ಹೆಚ್ಚು ಮಾದಿಗ ಸಮುದಾಯದ ಜನಸಂಖ್ಯೆ ಇದೆ. ಅವರ ಬೆಂಬಲದಿಂದಲೇ 2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಿತ್ರದುರ್ಗದಲ್ಲಿ ಎಸ್‌ಸಿ/ಎಸ್‌ಟಿ ಸಮಾವೇಶ ನಡೆದಾಗ, ಸಿಎಂ ಸಿದ್ದರಾಮಯ್ಯ ಅವರು ಒಳಮೀಸಲಾತಿ ಜಾರಿಗೆ ತರುತ್ತೇವೆ ಎಂದಿದ್ದರಿಂದ ಮಾದಿಗ ಸಮುದಾಯದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಆರಂಭಿಸಿದರು. ಅಷ್ಟೇ ಅಲ್ಲದೆ, ಸತತ 5 ದಶಕಗಳ ಕಾಲ ಕೆ ಹೆಚ್ ಮುನಿಯಪ್ಪ ಅವರು ರಾಜಕಾರಣದಲ್ಲಿದ್ದು, ಅವರನ್ನು ಮಂತ್ರಿ ಮಾಡಿದ ನಂತರ ಮಾದಿಗ ಸಮುದಾಯದವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಅಂತಹ ಧೀಮಂತ ನಾಯಕ ನಮ್ಮ ಎಚ್. ಕೆ. ಮುನಿಯಪ್ಪ ಆಗಿದ್ದಾರೆ ಎಂದರು.

ಸ್ವಾತಂತ್ರ್ಯ ಬಂದ ನಂತರದಿಂದ ಮಾದಿಗ ಸಮಾಜದ ಯಾವೊಬ್ಬ ವ್ಯಕ್ತಿಗೂ ಕಾಂಗ್ರೆಸ್ ಪಕ್ಷದಿಂದ ಉಪಮುಖ್ಯಮಂತ್ರಿಯಾಗಲಿ ಅಥವಾ ಮುಖ್ಯಮಂತ್ರಿ ಸ್ಥಾನವಾಗಲಿ ಸಿಕ್ಕಿಲ್ಲ. ಬಿಜೆಪಿಯಲ್ಲಿ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದರು, ಆದರೆ ಕಾಂಗ್ರೆಸ್‌ನಲ್ಲಿ ನೀಡಿಲ್ಲ. ಆದ್ದರಿಂದ ಈ ಬಾರಿ ಕೆ ಹೆಚ್ ಮುನಿಯಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು. ಅಷ್ಟೇ ಅಲ್ಲದೆ, ಮಾದಿಗ ಸಮುದಾಯದ ಇನ್ನೂ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯಸಮ್ಮತ ರಾಜಕೀಯ ಪ್ರತಿನಿಧಿತ್ವ ನೀಡಬೇಕು. ಇದರ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ಪ್ರಬಲತೆಯನ್ನು ಕಾಯ್ದುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

KH Muniyappa for dcm DSS Urges Congress

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.