ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ರವರಿಗೆ ಕಾಂಗ್ರೆಸ್ ಟಿಕೆಟ್ ಖಚಿತ
ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೊಂದಲಪಡುವ ಅವಶ್ಯಕತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ.
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಿಮ್ಮನೆ ರತ್ನಾಕರ್ರವರಿಗೆ ಸಿಗಲಿದೆ. ಅವರೇ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗೊಂದಲಪಡುವ ಅವಶ್ಯಕತೆಯಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ. ಕ್ಷೇತ್ರದ ಮತದಾರರಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಕೆಲವರು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ ಹೇಳಿದ್ದಾರೆ.
ಇದನ್ನು ಸಹ ಓದಿ : ಶಿವಮೊಗ್ಗಕ್ಕೆ ಭ್ರಷ್ಟರು ಎಸಿ ಆಗುವುದು ಬೇಡ/ ರಾಜ್ಯ ಸರ್ಕಾರಕ್ಕೆ ಒತ್ತಾಯ/ ಏನಿದು ಬೇಡಿಕೆ ವಿವರ ಇಲ್ಲಿದೆ ಓದಿ
ಟಿಕೆಟ್ ಗೊಂದಲದ ಬಗ್ಗೆ ಹೇಳಿಕೆಯೊಂದನ್ನ ನೀಡಿರುವ ಅವರು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಟಿಕೆಟ್ ಅವರಿಗೆ, ಇವರಿಗೆ, ಹೌದು ಇಲ್ಲ, ಅಭ್ಯರ್ಥಿ ಯಾರಾಗುತ್ತಾರೆ? ಯಾರಾಗ ಬಹುದು? ಎಂಬಂತಹ ಚರ್ಚೆಗಳು ಹಾಗೂ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಅಲ್ಲದೆ ಇಂತಹ ಸುದ್ದಿಗಳನ್ನು ಹರಿಬಿಡುವ ಮೂಲಕ, ಕೆಲವರು ತಾವೇ ಸಂಭ್ರಮ ಪಡುತ್ತಿದ್ದಾರೆ.
ಆದರೆ, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ನ (Thirthahalli Congress)ನಿಷ್ಠಾವಂತ ಕಾರ್ಯಕರ್ತರು, ಪ್ರಾಮಾಣಿಕ ಮುಖಂಡರು ಒಗ್ಗಟ್ಟಾಗಿದ್ದಾರೆ. ಪಕ್ಷಾಂತರಿಗಳೊಂದಿಗೆ ಈಗಾಗಲೇ ಹತ್ತು ಹಲವು ಪಕ್ಷ ಸುತ್ತಿದ ಒಂದಿಷ್ಟು ಜನ ಈಗಲೂ ಸುತ್ತು ಹಾಕುತ್ತಿದ್ದಾರೆಯೇ ಹೊರತು ನಮ್ಮ ಕಾರ್ಯಕರ್ತರು-ಮುಖಂಡರಲ್ಲಿ ಯಾವ ಗೊಂದಲಗಳೂ ಇಲ್ಲ.
ನಮ್ಮ ಸೋಶಿಯಲ್ ಮೀಡಿಯಾ : ಟ್ವಿಟ್ಟರ್ : ಫೇಸ್ಬಕ್ : ಇನ್ಸ್ಟಾಗ್ರಾಮ್ : ಟೆಲಿಗ್ರಾಂ : ವಾಟ್ಸ್ಯಾಪ್
ಕಾಂಗ್ರೆಸ್ ಪಕ್ಷ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ ನಮ್ಮ ನೆಚ್ಚಿನ ನಾಯಕರಾದ ಕಿಮ್ಮನೆ ರತ್ನಾಕರ್ (Kimmane Ratnakar,) ಅವರಿಗೆ ಟಿಕೆಟ್ ನೀಡಲಿದೆ. ಇದರಲ್ಲಿ ಯಾರಿಗೂ ಯಾವ ಗೊಂದಲಗಳೂ ಬೇಡ ಅಂತಾ ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್ (Amrapali Suresh) ತಿಳಿಸಿದ್ದಾರೆ.
ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್ಗೆ ಕ್ಲಿಕ್ ಮಾಡಿ : Whatsapp link