ರಾಗಿಗುಡ್ಡದ ಸಮೀಪ ಹೊನ್ನಾಳಿ ರಸ್ತೆಯಲ್ಲಿರುವ ವೈನ್ ಶಾಪ್ ಒಂದರಲ್ಲಿ ನಡೆಯುತ್ತಿದ್ದ ಗಲಾಟೆ ತಪ್ಪಿಸಲು ಹೋದ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಘಟನೆಯಲ್ಲಿ ರಾಗಿಗುಡ್ಡದ ನಿವಾಸಿ 27 ವರ್ಷದ ಸುನಿಲ್ ಕುಮಾರ್ ಎಂಬುವವರು ಗಾಯಗೊಂಡಿದ್ದಾರೆ.
ಶಿವಮೊಗ್ಗ ಗ್ರಾಮಾಂತರ : ರಾಗಿಗುಡ್ಡದ ಸಮೀಪದ ವೈನ್ ಶಾಪ್ನಲ್ಲಿ ಘಟನೆ
ಸುನಿಲ್ ಕುಮಾರ್ ಎಂಬವರು ತಮ್ಮ ಸ್ನೇಹಿತ ರಘು ಜೊತೆಗೂಡಿ ಡ್ರಿಂಕ್ಸ್ ಮಾಡಲು ಹೊನ್ನಾಳಿ ರಸ್ತೆಯಲ್ಲಿರುವ ವೈನ್ ಸ್ಟೋರ್ಗೆ ತೆರಳಿದ್ದರು. ಅದೇ ಮದ್ಯದಂಗಡಿಯಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಸ್ನೇಹಿತರ ಗುಂಪಿನೊಂದಿಗೆ ಯಾವುದೋ ವಿಚಾರಕ್ಕೆ ವಾಗ್ವಾದಕ್ಕಿಳಿದು ಜಗಳವಾಡುತ್ತಿದ್ದ. ಗುಂಪಿನ ನಡುವಿನ ಈ ಗಲಾಟೆಯನ್ನು ಗಮನಿಸಿದ ಸುನಿಲ್ ಕುಮಾರ್ ಅವರು, ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಅಲ್ಲಿಗೆ ತೆರಳಿ ಜಗಳ ಬಿಡಿಸಲು ಮುಂದಾಗಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ
ಈ ವೇಳೆ ಅಲ್ಲಿ ಜಗಳ ಆಡುತ್ತಿದ್ದ ವ್ಯಕ್ತಿ ಚಾಕುವಿನಿಂದ ಸುನಿಲ್ ಮೇಲೆ ದಾಳಿ ಮಾಡಿದ್ದಾನೆ. ಘಟನೆಯ ಸುನಿಲ್ ಕುಮಾರ್ ತಲೆ, ಕುತ್ತಿಗೆ ಹಾಗೂ ಮುಖದ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ಆರೋಪಿಸಲಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅಗತ್ಯ ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
