SHIVAMOGGA NEWS TODAY

ಕೂಡ್ಲಿ ಸಂಗಮೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಭಕ್ತ ಸಾಗರದಿಂದ ತುಂಗಾ-ಭದ್ರಾ ತೀರದಲ್ಲಿ ಪುಣ್ಯಸ್ನಾನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೊಳೆಹೊನ್ನೂರು: ತುಂಗಾ ಮತ್ತು ಭದ್ರಾ ನದಿಗಳ ಪವಿತ್ರ ಸಂಗಮ ಸ್ಥಾನವಾದ ಕೂಡ್ಲಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಸಂಗಮೇಶ್ವರ ಜಾತ್ರಾ ಮಹೋತ್ಸವವು ಯುಗಾದಿ ಅಮಾವಾಸ್ಯೆಯಂದು ಸಡಗರದಿಂದ ಆರಂಭವಾಗಿದೆ. ಒಂದು ವಾರದ ಕಾಲ ನಡೆಯುವ ಈ ಹೊಳೆ ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಮಾತ್ರವಲ್ಲದೆ, ಪಕ್ಕದ ಕೇರಳ ಮತ್ತು ಆಂಧ್ರಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. 

ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು

ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಗ್ರಾಮ ದೇವರುಗಳನ್ನು ಸಂಗಮೇಶ್ವರನ ಸನ್ನಿಧಾನಕ್ಕೆ ಕರೆತಂದ ಭಕ್ತರು, ನದಿಯಲ್ಲಿ ಪುಣ್ಯಸ್ನಾನ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಮಹಿಳೆಯರು, ಮಕ್ಕಳು ಹಾಗೂ ಹಿರಿಯರು ಸಂಗಮೇಶ್ವರನಿಗೆ ಹಣ್ಣು-ಕಾಯಿ ಅರ್ಪಿಸಿ ಭಕ್ತಿ ಸಮರ್ಪಿಸಿದರು. ಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆ ಇದ್ದಿದ್ದರಿಂದ ಭಕ್ತರು ನದಿಯಲ್ಲಿ ನಡೆದುಕೊಂಡು ಬಂದು ಜಾತ್ರೆ ಸೇರಿದರು. 

ಜಾತ್ರೆಯ ಹಿನ್ನೆಲೆಯಲ್ಲಿ ಸಂಗಮ ಸ್ಥಳದಿಂದ ಜಾತ್ರೆ ನಡೆಯುವ ಜಾಗಕ್ಕೆ ಹೋಗಿ ಬರಲು ಭಕ್ತರು ತೆಪ್ಪಗಳನ್ನು ಅವಲಂಬಿಸಿದ್ದಾರೆ. ಬಿಸಿಲ ಜಳ ಹೆಚ್ಚಿದ್ದರಿಂದ ಭಕ್ತರು ನದಿ ನೀರಿನಲ್ಲಿ ಮಿಂದು ನಿರಾಳರಾದರು. ಇನ್ನು ಜನಜಂಗುಳಿಯ ಲಾಭ ಪಡೆಯುವ ಜೇಬುಗಳ್ಳರ ಬಗ್ಗೆ ಮತ್ತು ನದಿಗೆ ಇಳಿಯುವ ಮಕ್ಕಳ ಸುರಕ್ಷತೆಯ ಬಗ್ಗೆ ಪೊಲೀಸರು ಧ್ವನಿವರ್ಧಕದ ಮೂಲಕ ನಿರಂತರ ಜಾಗೃತಿ ಮೂಡಿಸುತ್ತಿದ್ದಾರೆ.

Koodli Sangameshwara Jatre Holy Dip Tunga Bhadra

Koodli Sangameshwara Jatre Holy Dip Tunga Bhadra
Koodli Sangameshwara Jatre Holy Dip Tunga Bhadra
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.