POLITICS

ನನ್ನ ಹೃದಯ ಬಿಜೆಪಿಯಲ್ಲಿದೆ, ದೇಹ ಮಾತ್ರ ಹೊರಗಿದೆ: ಕೆ.ಎಸ್​. ಈಶ್ವರಪ್ಪ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನನ್ನ ಹೃದಯ ಯಾವಾಗಲೂ ಬಿಜೆಪಿಯಲ್ಲೇ ಇರುತ್ತದೆ, ಆದರೆ ದೇಹ ಮಾತ್ರ ಸದ್ಯಕ್ಕೆ ಹೊರಗಿದೆ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ತಾವು ಮತ್ತೆ ಬಿಜೆಪಿಗೆ ಮರಳುವ ಕುರಿತಾದ ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಾರೆ.

ಶಿವಮೊಗ್ಗ:  ಸಂಸದ ಬಿವೈ ರಾಘವೇಂದ್ರ ಹಾಗೂ ಶಾಸಕ ಎಸ್​ ಎನ್​ ಚನ್ನಬಸಪ್ಪಗೆ ಜಿಲ್ಲಾಧ್ಯಕ್ಷರು ಕರೆದು ಬುದ್ದಿ ಹೇಳಬೇಕು, ಹೆಚ್ ಸಿ ಯೋಗೀಶ್​

ಇಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಹೃದಯ ಬಿಜೆಪಿಗೆ ಮೀಸಲು. ನನ್ನ ದೇಹ ಮಾತ್ರ ಹೊರಗಿದೆಯೇ ಹೊರತು, ಮನಸ್ಸು ಪೂರ್ತಿಯಾಗಿ ಬಿಜೆಪಿಯಲ್ಲೇ ಇದೆ. ಆದರೆ ಪ್ರಸ್ತುತ ಬಿಜೆಪಿಯಲ್ಲಿ ಅನೇಕ ಸಮಸ್ಯೆಗಳಿದ್ದು, ಇದನ್ನು ನಾನು ಬಹಳ ಬೇಸರದಿಂದ ಹೇಳುತ್ತಿದ್ದೇನೆ. ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ನಾವು 25 ಸ್ಥಾನಗಳನ್ನು ಗೆದ್ದಿದ್ದೆವು, ಆದರೆ ನಂತರದ ದಿನಗಳಲ್ಲಿ ಆ ಸಂಖ್ಯೆ 17ಕ್ಕೆ ಇಳಿಯಿತು. ರಾಜ್ಯದ ಜನರು ಪಕ್ಷದ ಸಿದ್ಧಾಂತವನ್ನು ನೋಡಿ ಮತ ಹಾಕುತ್ತಾರೆ ಎಂದರು.

ಸದ್ಯ ರಾಜ್ಯ ಬಿಜೆಪಿಯಲ್ಲಿ ಸಂಘಟನೆ ಸರಿಯಾಗಿಲ್ಲ. ಪಕ್ಷದಲ್ಲಿ ಎಲ್ಲವೂ ಸರಿಯಾದ ಬಳಿಕ, ಹಿರಿಯರೊಂದಿಗೆ ಚರ್ಚಿಸಿ ನಾನು ಮತ್ತೆ ಬಿಜೆಪಿಗೆ ಸೇರುತ್ತೇನೆ ಎಂದು ಸ್ಪಷ್ಟಪಡಿಸಿದರು.

KS Eshwarappa Re-entry to BJP

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.