ಸಾಗರ: ಮನೆ ಅಂಗಳಕ್ಕೆ ನುಗ್ಗಿ ಸಾಕು ನಾಯಿಯ ಮೇಲೆ ಚಿರತೆ ದಾಳಿ, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಸಾಗರ | ಸಾಗರ ತಾಲೂಕಿನ ತುಮರಿ ಸಮೀಪದ ಕಾರಣಿ ಗ್ರಾಮದಲ್ಲಿ ಚಿರತೆಯೊಂದು ಸಾಕು ನಾಯಿಯ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜಪ್ಪ ಎಂಬುವವರಿಗೆ ಸೇರಿದ ಶ್ವಾನದ ಮೇಲೆ ಈ ಜಿರತೆಆಕ್ರಮಣ ಮಾಡಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ತಡರಾತ್ರಿ ಹೊಂಚು ಹಾಕಿ ಮನೆಯ ಮುಂಭಾಗದ ಆವರಣಕ್ಕೆ ನುಗ್ಗಿದ ಚಿರತೆಯು, ಒಮ್ಮೆಲೇ ನಾಯಿಯ ಕುತ್ತಿಗೆಯನ್ನು ಕಚ್ಚಿ ಹಿಡಿದು ಗಾಯಗೊಳಿಸಿದೆ. ಈ ವೇಳೆ ನಾಯಿ ಜೋರಾಗಿ ಕಿರುಚಾಡಲು ಪ್ರಾರಂಭಿಸಿದೆ. ಶ್ವಾನದ ಆಕ್ರಂದನ ಹಾಗೂ ಸದ್ದನ್ನು ಕೇಳಿ ಚಿರತೆಯು ತಕ್ಷಣವೇ ಅಲ್ಲಿಂದ ಓಡಿ ಹೋಗಿದೆ. ಚಿರತೆಯ ದವಡೆಯಿಂದ ನಾಯಿ ಕೂದಲೆಳೆ ಅಂತರದಲ್ಲಿ  ಪಾರಾಗಿದ್ದರೂ, ತೀವ್ರವಾಗಿ ಗಾಯಗೊಂಡಿದೆ ಎಂದು ತಿಳಿದುಬಂದಿದೆ. 

Leopard Attacks Pet Dog in Sagara’s Tumari