SHIVAMOGGA NEWS TODAY

ಸಾಗರ: ಮನೆ ಅಂಗಳಕ್ಕೆ ನುಗ್ಗಿ ಸಾಕು ನಾಯಿಯ ಮೇಲೆ ಚಿರತೆ ದಾಳಿ, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ | ಸಾಗರ ತಾಲೂಕಿನ ತುಮರಿ ಸಮೀಪದ ಕಾರಣಿ ಗ್ರಾಮದಲ್ಲಿ ಚಿರತೆಯೊಂದು ಸಾಕು ನಾಯಿಯ ಮೇಲೆ ಭೀಕರ ದಾಳಿ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜಪ್ಪ ಎಂಬುವವರಿಗೆ ಸೇರಿದ ಶ್ವಾನದ ಮೇಲೆ ಈ ಜಿರತೆಆಕ್ರಮಣ ಮಾಡಿದ್ದು, ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ತಡರಾತ್ರಿ ಹೊಂಚು ಹಾಕಿ ಮನೆಯ ಮುಂಭಾಗದ ಆವರಣಕ್ಕೆ ನುಗ್ಗಿದ ಚಿರತೆಯು, ಒಮ್ಮೆಲೇ ನಾಯಿಯ ಕುತ್ತಿಗೆಯನ್ನು ಕಚ್ಚಿ ಹಿಡಿದು ಗಾಯಗೊಳಿಸಿದೆ. ಈ ವೇಳೆ ನಾಯಿ ಜೋರಾಗಿ ಕಿರುಚಾಡಲು ಪ್ರಾರಂಭಿಸಿದೆ. ಶ್ವಾನದ ಆಕ್ರಂದನ ಹಾಗೂ ಸದ್ದನ್ನು ಕೇಳಿ ಚಿರತೆಯು ತಕ್ಷಣವೇ ಅಲ್ಲಿಂದ ಓಡಿ ಹೋಗಿದೆ. ಚಿರತೆಯ ದವಡೆಯಿಂದ ನಾಯಿ ಕೂದಲೆಳೆ ಅಂತರದಲ್ಲಿ  ಪಾರಾಗಿದ್ದರೂ, ತೀವ್ರವಾಗಿ ಗಾಯಗೊಂಡಿದೆ ಎಂದು ತಿಳಿದುಬಂದಿದೆ. 

Leopard Attacks Pet Dog in Sagara’s Tumari

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.