ಶಿರಾಳಕೊಪ್ಪ: ತಾಳಗುಂದ ರಾಜ್ಯ ಅರಣ್ಯದ ಅಂಚಿನಲ್ಲಿ ಕಾಡುಪ್ರಾಣಿಗಳನ್ನು ಹಿಡಿಯಲು ಹಾಕಲಾಗಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಶಿಕಾರಿಪುರ ತಾಲ್ಲೂಕಿನ ತಾಳಗುಂದ ರಾಜ್ಯ ಅರಣ್ಯ ಪ್ರದೇಶದ ಖಾಸಗಿ ಜಮೀನಿನ ಅಂಚಿನಲ್ಲಿ ಕಾಡಿನೊಳಗೆ ಹಾದುಹೋಗುವ ದಾರಿಯಲ್ಲಿ ಈ ಉರುಳನ್ನು ಹಾಕಲಾಗಿದೆ ಎನ್ನಲಾಗಿದೆ. ಸ್ಥಳೀಯರು ಅರಣ್ಯದಂಚಿನಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಚಿರತೆಯ ಕೊಳೆತ ದೇಹವನ್ನು ಗಮನಿಸಿದ್ದಾರೆ. ಕೂಡಲೇ ಅವರು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ (RFO) ಜಾವೀದ್ ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
Leopard Dies in Snare Near Talagunda Forest








