ಡಿವೋರ್ಸ್​ಗೆ ಕೋರ್ಟ್​ ಹೋಗಿ , ಜಡ್ಜ್​ ಎದುರು ಮತ್ತೆ ಒಂದಾದ ಜೋಡಿ! ರಾಜಿ ಒಳ್ಳೆಯದು ಎಂದ ನ್ಯಾಯಾದೀಶರು!

KARNATAKA NEWS/ ONLINE / Malenadu today/ Sep 10, 2023 SHIVAMOGGA NEWS 

ರಾಜೀ ಸಂಧಾನದಿಂದ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸಂಬಂಧ ಮತ್ತು ಸಮಯವನ್ನು ಕಕ್ಷಿದಾರರು ಉಳಿಸಿಕೊಳ್ಳಬಹುದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ (Karnataka High Court) ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಆರ್. ದೇವದಾಸ್ ಹೇಳಿದರು.

 

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದೊಂದಿಗೆ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರ ನ್ಯಾಯಾಲಯ, ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಲೋಕ್ ಅದಾಲಯ್‍ನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Malenadu Today Shivamogga

ಎಲ್ಲಿಯವರೆಗೆ ಮನುಷ್ಯ ಇರುತ್ತಾನೋ ಅಲ್ಲಿಯವರೆಗೆ ವ್ಯಾಜ್ಯಗಳಿರುತ್ತವೆ. ಆದರೆ ಕಕ್ಷಿದಾರರು ಆದಷ್ಟು ಕೋರ್ಟಿಗೆ ಬರುವುದನ್ನು ಕಡಿಮೆ ಮಾಡಬೇಕು. ಬಹಳಷ್ಟು ವ್ಯಾಜ್ಯಗಳನ್ನು ನಮ್ಮಲ್ಲೇ ಇತ್ಯರ್ಥಪಡಿಸಿಕೊಳ್ಳಬಹುದು. ಮಧ್ಯಸ್ಥಿಕೆ ವಹಿಸುವ ಮೂಲಕ, ರಾಜೀ ಮಾಡುವ ಮೂಲಕ ಅನೇಕ ಸಮಸ್ಯೆಗಳು, ವ್ಯಾಜ್ಯಗಳನ್ನು ಇತ್ಯರ್ಥಪಡಿಸಬಹುದು. 

ಈ ಉದ್ದೇಶದಿಂದಲೇ ಲೋಕ್ ಅದಾಲತ್‍ನ್ನು ನಡೆಸಲಾಗುತ್ತಿದೆ. ಕಕ್ಷಿದಾರರಿಗೆ ಶೀಘ್ರ ನ್ಯಾಯ ಒದಗಿಸಲು ಮತ್ತು ಅವರ ಸಮಯ, ಸಂಬಂಧ, ಹಣ ಉಳಿಸಲು ಲೋಕ್ ಅದಾಲತ್‍ನಲ್ಲಿ ರಾಜೀ ಸೂತ್ರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ. ವ್ಯಾಜ್ಯಗಳು, ಭಿನ್ನಾಭಿಪ್ರಾಯಗಳು ಕಡಿಮೆಯಾದಷ್ಟು ಸಂತೋಷವಾಗಿರ್ತೀವಿ. ಆದ್ದರಿಂದ ಕಕ್ಷಿದಾರರು ತಮ್ಮ ಭಿನ್ನಾಭಿಪ್ರಾಯವನ್ನು ಸೂಕ್ತ ರೀತಿಯಲ್ಲಿ ನಿವಾರಿಸಿಕೊಳ್ಳಲು ಮನಸ್ಸು ಮಾಡಬೇಕು. ಲೋಕ್ ಅದಾಲತ್‍ನ ಸದುಪಯೋಗ ಪಡೆಯಬೇಕೆಂದರು.

Malenadu Today Shivamogga

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಸಕ್ತ ಸಾಲಿನ 3 ನೇ ಲೋಕ್ ಅದಾಲತ್‍ನ್ನು ಇಂದು ನಡೆಸಲಾಗುತ್ತಿದೆ. ಜಿಲ್ಲೆಯ 12 ಪೀಠಗಳು ಇಂದು ಲೋಕ್ ಅದಾಲತ್‍ನ್ನು ನಿರ್ವಹಣೆ ಮಾಡುತ್ತಿವೆ. 12 ಸಾವಿರ ನ್ಯಾಯಾಲಯದ ಪ್ರಕರಣಗಳು ಮತ್ತು 85 ಸಾವಿರ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶ ಹೊಂದಲಾಗಿದೆ. 

 

ಜುಲೈನಲ್ಲಿ ನಡೆದ ಕಳೆದ ಲೋಕ್ ಅದಾಲತ್‍ನಲ್ಲಿ 10691 ನ್ಯಾಯಾಲಯದ ಪ್ರಕರಣಗಳು ಮತ್ತು 78110 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 88801 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು ಎಂದರು.

Malenadu Today Shivamogga

ಇದೇ ವೇಳೆ ಸಾಂಕೇತಿಕವಾಗಿ ಪ್ರಕರಣಗಳ ರಾಜೀ ಪತ್ರವನ್ನು ವಿತರಿಸಿದರು. ಹೊಳಲೂರಿನ ವ್ಯಾಜ್ಯ ಪ್ರಕ್ರರಣದಲ್ಲಿ ರಾಜೀ ಆದ ಕುಟುಂಬಗಳ ಕಕ್ಷಿದಾರರಿಗೆ, ಅಪಘಾತ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದ ಕಕ್ಷಿದಾರರಿಗೆ ರಾಜೀಪತ್ರ ನೀಡಲಾಯಿತು. ಹಾಗೂ ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿ, ರಾಜೀ ಆದ ದಂಪತಿಗೆ ಹಾರ ಬದಲಾಯಿಸಿ, ಸಿಹಿ ನೀಡಿ ರಾಜೀಪತ್ರ ವಿತರಣೆ ಮಾಡಿದರು.

 

ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್., ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್‍ಕುಮಾರ್, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎನ್.ಚಂದನ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರು, ಅಭಿಯೋಜಕರು, ನ್ಯಾಯವಾದಿಗಳು, ವಿಮಾ ಕಂಪನಿಯ ಅಧಿಕಾರಿಗಳು, ಕಕ್ಷಿದಾರರು ಹಾಜರಿದ್ದರು.

Malenadu Today Shivamogga


 

ಇನ್ನಷ್ಟು ಸುದ್ದಿಗಳು 

 

 


 

 

Leave a Comment