ಲೋಕಾಯುಕ್ತ ರೇಡ್ ಎಫೆಕ್ಟ್ / ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಅಮಾನತು!
Lokayukta raid effect / Shimoga Tehsildar Nagaraj suspended!ಲೋಕಾಯುಕ್ತ ರೇಡ್ ಎಫೆಕ್ಟ್ / ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಅಮಾನತು!

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS
ಶಿವಮೊಗ್ಗದದಲ್ಲಿ ತಹಶೀಲ್ದಾರ್ ಆಗಿರುವ ಎನ್ಜೆ ನಾಗರಾಜ್ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.
ಸರ್ಕಾರದ ಆದೇಶದಲ್ಲಿ ಏನಿದೆ
ಸರ್ಕಾರದ ಆದೇಶ ಸಂಖ್ಯೆ:ಕಂಇ 45 ಎಎಸ್ಡಿ 2023, ಬೆಂಗಳೂರು ದಿನಾಂಕ:12.09.2023.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರವು ಶ್ರೀ ಎನ್.ಜೆ. ನಾಗರಾಜ, ಹಿಂದಿನ ತಹಶೀಲ್ದಾರ್ ಗ್ರೇಡ್-1 ಹೊಳಲ್ಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ (ಹಾಲಿ ತಹಶೀಲ್ದಾರ್ ಗ್ರೇಡ್-1, ಶಿವಮೊಗ್ಗ ತಾಲ್ಲೂಕು ರವರ ವಿರುದ್ಧ ದಾಖಲಾದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018)ರ ಕಲಂ 13(1)(29) & 13(2) ರನ್ವಯ ದಾಖಲಾದ ಕ್ರಿಮಿನಲ್ ಮೊಕದ್ದಮ ಸಂಖ್ಯೆ:11/2023ರಲ್ಲಿನ ಆರೋಪದ ಸಂಬಂಧ ಅವರ ವಿರುದ್ಧ ಇಲಾಖಾ ವಿಚಾರಣೆ/ತನಿಖೆಯನ್ನು ಬಾಕಿಯಿರಿಸಿ ಕರ್ನಾಟಕ ನಾಗರಿಕ ಸೇವಾ (ವ.ನಿ.&ಮೇ) ನಿಯಮಗಳು-1957ರ ನಿಯಮ-10(1)(ಎಎ) ರನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ/
ಮುಂದುವರೆದು, ಶ್ರೀ ಎನ್.ಜೆ. ನಾಗರಾಜ, ತಹಶೀಲ್ದಾರ್ ಗ್ರೇಡ್-1 ಇವರಿಗೆ ಅಮಾನತ್ತಿನ ಅವಧಿಯಲ್ಲಿ ಕ.ಸಿ.ಎಸ್.ಆರ್ ನಿಯಮ-98(1)(ಎ) ರನ್ವಯ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯುತ್ತಾರೆ .ಸದರಿಯವರು ಸಕ್ಷಮ ಪ್ರಾಧಿಕಾರದ ಪೂರ್ವನುಮತಿಯಿಲ್ಲದ ಕೇಂದ್ರ ಸ್ನಾನವನ್ನು ಬಿಡತಕ್ಕದ್ದಲ್ಲ. ಸದರಿಯವರ ಲೀನ್ ಅನ್ನು ಯಾದಗಿರಿ ಜಿಲ್ಲಾಧಿಕಾರಿಗಳ ಕಛೇರಿಗೆ ವರ್ಗಾಯಿಸಿದೆ.
ಏನಿದು ಪ್ರಕರಣ
ಸರ್ಕಾರ ನಾಗರಾಜ್ರವರ ವಿರುದ್ಧ ದಾಖಲಾದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 (ತಿದ್ದುಪಡಿ ಕಾಯ್ದೆ 2018)ರ ಕಲಂ 13(1)(ಬಿ) & 13(2) ರನ್ನಯ ದಾಖಲಾದ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:11/2023ರಲ್ಲಿನ ಆರೋಪದ ಸಂಬಂಧ ಅವರ ವಿರುದ್ಧ ಇಲಾಖಾ ವಿಚಾರಣೆ/ ತನಿಖೆಯನ್ನು ಕಾಯ್ದಿರಿಸಿ, ಸದರಿಯವರನ್ನು ಸೇವೆಯಿಂದ ಅಮಾನತ್ತಿನಲ್ಲಿಡಲು ತೀರ್ಮಾನಿಸಿದೆ.
ಕಳೆದ ಏಪ್ರಿಲ್ ತಿಂಗಳಿನಲ್ಲಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆ ಲೋಕಾಯುಕ್ತ ಪೊಲೀಸರು ಕೋರ್ಟ್ ಅನುಮತಿ ಪಡೆದು ವಿವಿದೆಡೆ ರೇಡ್ ನಡೆಸಿದ್ದರು. ನಾಗರಾಜ್ರವರ ವಿರುದ್ಧವೂ ರೇಡ್ ನಡೆದಿತ್ತು. ಈ ವೇಳೆ ಶಿಕಾರಿಪುರ ಟೌನ್, ಶಿವಮೊಗ್ಗ , ಹೊಳಲ್ಕೆರೆ ಮತ್ತು ವಿವಿದೆಡೆ ದಾಳಿ ನಡೆದಿತ್ತು. ಈ ವೇಳೆ ಆದಾಯಕ್ಕೂ ಮೀರಿದ ಆಸ್ತಿ ಗಳಿಸಿದ ಬಗ್ಗೆ ಆರೋಪಿಸಲಾಗಿತ್ತು.
ಇನ್ನಷ್ಟು ಸುದ್ದಿಗಳು
-
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
-
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!